ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹೆಚ್.ಡಿ ರೇವಣ್ಣ ಸಂತ್ರಸ್ತೆಯನ್ನು ಕಿಡ್ನ್ಯಾಪ್ ಮಾಡಿದ ಪ್ರಕರಣಕ್ಕೆ ಭವಾನಿ ರೇವಣ್ಣ ಕಾರು ಚಾಲಕ ಅಜಿತ್ಗೆ ಎಸ್ಐಟಿ ಪೊಲೀಸರಿಂದ ಸಮನ್ಸ್ ಜಾರಿ ಮಾಡಲಾಗಿದೆ.
ರೇವಣ್ಣ ಪತ್ನಿ ಸಂತ್ರಸ್ತೆಯನ್ನು ಚಾಲಕ ಅಜಿತ್ ಕಾರಿನಲ್ಲಿ ಕರೆದೊಯ್ದಿದ್ದ ಆರೋಪ ಕೇಳಿಬಂದಿದ್ದು ಹೀಗಾಗಿ ಸಂತ್ರಸ್ತೆ ಕಿಡ್ನ್ಯಾಪ್ ಪ್ರಕರಣ ಸಂಬಂಧ ಎಸ್ಐಟಿ ಈಗಾಗಲೇ 2 ಬಾರಿ ಸಮನ್ಸ್ ನೀಡಲಾಗಿದೆ.
ಲೈಂಗಿಕ ಕಿರುಕುಳ, ಕಿಡ್ನ್ಯಾಪ್ ಎರಡೂ ಕೇಸ್ನಲ್ಲೂ ಭವಾನಿ ರೇವಣ್ಣ ಹೆಸರು ಉಲ್ಲೇಖಿಸಲಾಗಿದೆ. ಹೀಗಾಗಿ ಭವಾನಿ ಕರೆದರು ಅಂತಾ ಹೇಳಿಯೇ ಮಹಿಳೆಯನ್ನ ಕಿಡ್ನ್ಯಾಪ್ ಮಾಡಿರುವ ಆರೋಪ ಮಾಡಲಾಗಿದೆ.
Ad