ಬೆಂಗಳೂರು: ಚುನಾವಣಾ ರ್ಯಾಲಿ ವೇಳೆ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರ ಕಾರಿಗೆ ದ್ವಿಚಕ್ರ ವಾಹನ ಡಿಕ್ಕಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ.
ಕೆ.ಆರ್ ಪುರಂನ ಗಣೇಶ ದೇವಸ್ತಾನದ ಬಳಿ ನಡೆದ ಘಟನೆ ನಡೆದಿದ್ದು, ಸ್ಕೂಟರ್ ಸವಾರ ಪ್ರಕಾಶ್ (35) ಸಾವನ್ನಪ್ಪಿದ್ದಾರೆ.
ಸಿಬ್ಬಂದಿ ನಿಂತಿದ್ದ ಕಾರಿನ ಡೋರ್ ಒಪನ್ ಮಾಡಿದ್ದು, ಹಿಂಬದಿಯಿಂದ ಬಂದ ಪ್ರಕಾಶ್ಗೆ ಡೋರ್ಗೆ ಡಿಕ್ಕಿ ಹೊಡೆದು ಬಿದ್ದಿದ್ದಾರೆ. ಈ ವೇಳೆ ಬಸ್ ಅವರ ಮೇಲೆ ಹರಿದಿದ್ದು, ಗಂಭೀರ ಗಾಯಗೊಂಡಿದ್ದಾರೆ.
ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಪ್ರಕಾಶ್ ಸಾವನ್ನಪ್ಪಿದ್ದಾರೆ. ಕೆಆರ್ ಪುರಂ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.