ಬೆಂಗಳೂರು: ಬಹುದಿನಗಳಿಂದ ರಾಜಕೀಯ ಪಡಸಾಲೆಯಲ್ಲಿ ಚರ್ಚೆಗೊಳಗಾಗಿದ್ದ ಬಿಜೆಪಿ-ಜೆಡಿಎಸ್ ಮೈತ್ರಿಗೆ ಅಧಿಕೃತ ಮುದ್ರೆ ಬಿದ್ದಿದೆ. ರಾಜ್ಯದ ಹಿತಕ್ಕಾಗಿ ಬಿಜೆಪಿ ಜೊತೆ ಮೈತ್ರಿ ಅಂತ ಕುಮಾರಸ್ವಾಮಿ ಹೇಳ್ತಿದ್ದಾರೆ.
ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಬಗ್ಗೆ ಕಾಂಗ್ರೆಸ್ಸಿಗರು ಲೇವಡಿ ಮಾಡ್ತಿದ್ದು ಜಾತ್ಯತೀತ ಎಂಬ ಪದವನ್ನು ತೆಗೆಯಲಿ ಅಂತ ಟೀಕಿಸಿದ್ದರು. ಈ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ ಜೆಡಿಎಸ್ ನಾಯಕರು ಕಾಂಗ್ರೆಸ್ಸಿಗರ ಆರೋಪಕ್ಕೆ ಸ್ಪಷ್ಟನೆ ನೀಡಿದ್ದಾರೆ. ಇದೇ ವೇಳೆ ಮಾತನಾಡಿದ ಮಾಜಿ ಪ್ರಧಾನಿ ದೇವೇಗೌಡರು ಮೈತ್ರಿ ವಿಚಾರದಲ್ಲಿ ಕದ್ದು ಮುಚ್ಚಿ ಚರ್ಚೆ ಅಗತ್ಯವಿಲ್ಲ. ಮೊದಲ ಹಂತದಲ್ಲಿ ಚರ್ಚೆ ಆಗಿದೆ.
ರಾಜ್ಯದ ಜನರ ಹಿತ ಹಾಗೂ ಪಕ್ಷ ಉಳಿಸಲು ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದೀವಿ ಅಂತ ದೇವೇಗೌಡರು ತಿರುಗೇಟು ನೀಡಿದ್ದಾರೆ.