ಬೆಂಗಳೂರು: ಬಿಜೆಪಿ ಬೆಂಬಲಿಗರು ಕಾತುರದಿಂದ ಕಾಯುತ್ತಿದ್ದ ಕರ್ನಾಟಕ 28 ಕ್ಷೇತ್ರಗಳಲ್ಲಿ 20ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಹೆಸರು ಇದೀಗ ಬಿಡುಗಡೆಯಾಗಿದೆ. ಕೆಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಆಗುತ್ತಿದ್ದಂತೆ ಸಂಭ್ರಮಾಚರಿಸಿದ್ದಾರೆ ಆದರೆ ಇನ್ನೂ ಕೆಲವು ಕ್ಷೇತ್ರಗಳಲ್ಲಿ ಅಸಮಧಾನ ವ್ಯಕ್ತವಾಗಿದೆ.
ಅದರಲ್ಲೂ ಉಡುಪಿ-ಚಿಕ್ಕಮಗಳೂರು ಕ್ಷೇತ್ರಗಳಲ್ಲಿ ಭಾರಿ ಅಸಮಧಾನ ವ್ಯಕ್ತವಾಗಿದೆ. ಈ ಕಾರಣ ಶೋಭ ಕರಂದ್ಲಾಜೆಗೆ ಬೆಂಗಳೂರು ಗ್ರಾಮಾಂತರ ಟಿಕೆಟ್ ನೀಡಲಾಗಿತ್ತು ಆದರೆ ಅಲ್ಲೂ ಅವರ ವಿರುದ್ಧ ವಿರೋಧ ವ್ಯಕ್ತವಾಗಿದೆ.
ಟಿಕೇಟ್ ಘೋಷಣೆ ಬೆನ್ನೆಲ್ಲೆ ಇನ್ನು ಕೆಲವು ಕ್ಷೇತ್ರಗಳಲ್ಲಿ ಭಾರಿ ಅಸಮಧಾನ ವ್ಯಕ್ತವಾಗಿತ್ತು ಅವು ಯಾವೆಲ್ಲ ಅಂದರೆ, ಬೆಂಗಳೂರು ಉತ್ತರ, ಕೊಪ್ಪಳ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳುರು, ಚಾಮರಾಜನಗರ, ಮೈಸೂರು, ದಾವಣಗೆರೆ, ಬೀದರ್, ಶಿವಮೊಗ್ಗ, ಚಿಕ್ಕೋಡಿ, ತುಮಕೂರು ಕ್ಷೇತ್ರದಲ್ಲಿ ಅಸಮಾಧಾನ ಸ್ಫೋಟಗೊಂಡಿದೆ.