ಬೆಂಗಳೂರು: ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆ ಬಿಜೆಪಿ ಸದಸ್ಯರ ಗಲಾಟೆ ಶುರು ಮಾಡಿದ್ದು, ಗ್ಯಾರಂಟಿ ಬಗ್ಗೆ ಚರ್ಚೆ ಮಾಡಲು ಅವಕಾಶ ನೀಡುವಂತೆ ಬಿಜೆಪಿಯವರು ಪಟ್ಟು ಹಿಡಿದಿದ್ದಾರೆ. ಸದನದ ಬಾವಿಗಿಳಿದು ಬಿಜೆಪಿ ಸದಸ್ಯರು ಪ್ರತಿಭಟಿಸುತ್ತಿದ್ದಾರೆ. ದ್ರೋಹ ದ್ರೋಹ ಕಾಂಗ್ರೆಸ್ ದ್ರೋಹ ಎಂದು ಬಿಜೆಪಿ ಘೋಷಣೆ ಮಾಡುತ್ತಿದ್ದರೆ, ಇತ್ತ ಕಾಂಗ್ರೆಸ್ ಶಾಸಕರು ಬಿಜೆಪಿ ವಿರುದ್ದ ಘೋಷಣೆ ಕೂಗಿದ್ದಾರೆ.
ಇದಕ್ಕೆ ಪ್ರತಿಯಾಗಿ ‘ಈ ಮೊಂಡಾಟ ಬಿಡಿ, ಮೊಂಡಾಟದಿಂದ ಏನೂ ಆಗಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಮತ್ತೆ ಇದೇ ಮೊಂಡಾಟ ಪದಕ್ಕೆ ಬಿಜೆಪಿ ಗದ್ದಲ ಮಾಡಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ ‘ಮೊಂಡಾಟ ಅಸಂವಿಧಾನ ಪದವಾ?, ಯಾವುದೇ ಪ್ರಶ್ನೆಗೆ ಉತ್ತರ ನೀಡಲು ನಾವು ತಯಾರು. ವಿಪಕ್ಷಗಳ ಮಾತಿಗೆ ಹೆದರಿಕೊಂಡು ಓಡಿ ಹೋಗಲ್ಲ ಎಂದರು.ಬಳಿಕ ಕಲಾಪವನ್ನ 15 ನಿಮಿಷ ಸಭಾಪತಿ ಯುಟಿ ಖಾದರ್ ಮುಂದೂಡಿದರು.
ಇತ್ತ ಸರ್ಕಾರ ಬಂದು 45 ದಿನ ಕಳೆದರೂ ಗ್ಯಾರಂಟಿ ಜಾರಿ ಮಾಡಿಲ್ಲ ಎಂದು ಕಾಂಗ್ರೆಸ್ ವಿರುದ್ದ ಫ್ರೀಡಂಪಾರ್ಕ್ನಲ್ಲಿ ಬಿಜೆಪಿ ಶಾಸಕ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಅಧಿಕಾರಕ್ಕೆ ಬಂದ ಮೇಲೆ ಗ್ಯಾರಂಟಿಗಳಿಗೆ ಷರತ್ತು ಹಾಕ್ತಿದ್ದಾರೆ. ಹೀಗಾಗಿ ಬಿಜೆಪಿ ಬೀದಿಗೆ ಇಳಿಯುವ ಸಂದರ್ಭ ಎದುರಾಗಿದೆ ಎಂದರು.