News Karnataka Kannada
Monday, April 29 2024
ಬೆಂಗಳೂರು

ನಿರ್ದೇಶಕಿ ಕಾರ್ತಿಕಿಗೆ ಬೊಮ್ಮನ್‌-ಬೆಳ್ಳಿ ದಂಪತಿಯಿಂದ ಲೀಗಲ್ ನೋಟಿಸ್

The Elephant Whisperers
Photo Credit : Twitter

ಬೆಂಗಳೂರು: ಕಾರ್ತಿಕಿ​ ಗೋನ್ಸಾಲ್ವಿಸ್ ನಿರ್ದೇಶನದಲ್ಲಿ ಮೂಡಿಬಂದ ‘ದಿ ಎಲಿಫೆಂಟ್​ ವಿಸ್ಪರರ್ಸ್​’ ಸಾಕ್ಷ್ಯಚಿತ್ರಕ್ಕೆ ಈ ವರ್ಷ ಆಸ್ಕರ್ ಅವಾರ್ಡ್ ಸಿಕ್ಕಿದೆ. ನಿರ್ದೇಶಕಿ ಕಾರ್ತಿಕಿ ಅವರಿಗೆ ಇದೀಗ ಬೊಮ್ಮನ್‌ ಹಾಗೂ ಬೆಳ್ಳಿ ದಂಪತಿ ಲೀಗಲ್ ನೋಟಿಸ್ ಕಳುಹಿಸಿದ್ದಾರೆ.

2 ಕೋಟಿ ರೂಪಾಯಿ ಪರಿಹಾರ ನೀಡುವಂತೆ ಕೋರಲಾಗಿದೆ. ಸಾಕ್ಷ್ಯಚಿತ್ರ ಶೂಟ್ ಮಾಡುವ ಸಂದರ್ಭದಲ್ಲಿ ಒಂದು ಮನೆ ಕಟ್ಟಿಕೊಡುವ ಭರವಸೆ ನೀಡಲಾಗಿತ್ತು. ಒಂದು ವಾಹನ ಹಾಗೂ ಆರ್ಥಿಕ ಸಹಾಯದ ಭರವಸೆಯನ್ನೂ ಇವರಿಗೆ ಕಾರ್ತಿಕಿ ನೀಡಿದ್ದರು. ಆದರೆ, ಅದಾವುದೂ ನೆರವೇರಿಲ್ಲ ಎಂದು ಯಟ್ಯೂಬ್‌ ಸಂದರ್ಶನದಲ್ಲಿ ಈ ಬಗ್ಗೆ ದಂಪತಿ ಮಾತನಾಡಿದ್ದಾರೆ.

‘ನಮ್ಮನ್ನು ರಿಯಲ್ ಹೀರೊಗಳು ಎಂದು ಎಲ್ಲ ಕಡೆಗಳಲ್ಲೂ ಪರಿಚಯಿಸಲಾಯಿತು. ಆದರೆ, ತಂಡದವರ ಕಡೆಯಿಂದ ನಮಗೆ ಹಣದ ಸಹಾಯ ಸಿಕ್ಕಿಲ್ಲ. ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಹಾಗೂ ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ದೇಣಿಗೆಗಳನ್ನು ತಂಡದವರು ಸ್ವೀಕರಿಸಿದ್ದಾರೆ. ಆದರೆ, ನಮಗೆ ಯಾವುದೇ ಪರಿಹಾರ ನೀಡದೆ ತಂಡದವರು ಎಲ್ಲಾ ಹಣಕಾಸಿನ ಲಾಭಗಳನ್ನು ಪಡೆದರು’ ಎಂದು ದಂಪತಿ ಆರೋಪಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು