News Karnataka Kannada
Thursday, May 02 2024
ಬೆಂಗಳೂರು

ನಮ್ಮ ಗೆಲುವನ್ನು ಯಾವ ದುಷ್ಟ ಶಕ್ತಿಯೂ ತಡೆಯಲಾರದು : ವಿಜಯೇಂದ್ರ

ಲೋಕಸಭಾ ಚುನಾವಣೆ ಹಿನ್ನಲೆ, ಈ ಬಾರಿ ರಾಜ್ಯದ 28ಕ್ಕೆ 28ಕ್ಷೇತ್ರಗಳಲ್ಲಿ ಬಿಜೆಪಿಯ ಗೆಲುವು ಖಚಿತ ಎಂದು ಭರವಸೆ ನೀಡಿದ್ದಾರೆ.ಬಿಜೆಪಿ ಸರ್ಕಾರ ಜನಪರ ಸರ್ಕಾರ. ಕೇಂದ್ರ ಸರ್ಕಾರ ಜನರಿಗಾಗಿ ದುಡಿದಿದೆ. ಹಾಗೂ ಜನತೆಗೆ ಕೂಡ ಮೋದಿಯವರನ್ನೆ ಮತ್ತೊಮ್ಮೆ ಪ್ರಧಾನಿಯಾಗಿ ನೋಡಬೇಕು ಎಂಬ ಆಸೆ ಇದೆ ಹಾಗಾಗಿ ಈ ಬಾರಿಯ ಬಿಜೆಪಿ ಗೆಲುವನ್ನು ತಡೆಯಲು ಯಾವ ದುಷ್ಟಶಕ್ತಿಯಿಂದಲು ಸಾಧ್ಯವಿಲ್ಲ ಎಂದರು.
Photo Credit : News Kannada

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನಲೆ, ಈ ಬಾರಿ ರಾಜ್ಯದ 28ಕ್ಕೆ 28ಕ್ಷೇತ್ರಗಳಲ್ಲಿ ಬಿಜೆಪಿಯ ಗೆಲುವು ಖಚಿತ ಎಂದು ಭರವಸೆ ನೀಡಿದ್ದಾರೆ .ಬಿಜೆಪಿ ಸರ್ಕಾರ ಜನಪರ ಸರ್ಕಾರ. ಕೇಂದ್ರ ಸರ್ಕಾರ ಜನರಿಗಾಗಿ ದುಡಿದಿದೆ. ಹಾಗೂ ಜನತೆಗೆ ಕೂಡ ಮೋದಿಯವರನ್ನೆ ಮತ್ತೊಮ್ಮೆ ಪ್ರಧಾನಿಯಾಗಿ ನೋಡಬೇಕು ಎಂಬ ಆಸೆ ಇದೆ ಹಾಗಾಗಿ ಈ ಬಾರಿಯ ಬಿಜೆಪಿ ಗೆಲುವನ್ನು ತಡೆಯಲು ಯಾವ ದುಷ್ಟಶಕ್ತಿಯಿಂದಲು ಸಾಧ್ಯವಿಲ್ಲ ಎಂದರು.

ಬೆಂಗಳೂರು ಕೇಂದ್ರ ಜಿಲ್ಲೆ ಲೋಕಸಭಾ ಕ್ಷೇತ್ರದ ಚುನಾವಣಾ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಬಿ.ವೈ. ವಿಜಯೇಂದ್ರ ಮೋದಿಯವರನ್ನು ಶ್ಲಾಘಿಸುವುದಲ್ಲದೆ ಅವರ ಕಾರ್ಯಗಳನ್ನು ವಿವರಿಸಿದ್ದಾರೆ. ಮತ್ತು ಕಾರ್ಯಕರ್ತರಿಗೆ ಕಿವಿಮಾತು ನೀಡಿದ ಅವರು ಮತ್ತೊಮ್ಮೆ ಮೋದಿ ಪ್ರಧಾನಿ ಆಗಬೇಕು ಎಂದರೆ ನಮ್ಮ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು.ಕಾರ್ಯಕರ್ತರು ಮನೆ ಮನೆಗೆ ತೆರಳಿ ಬಿಜೆಪಿ ಪರ‌ ಮತಯಾಚನೆ ಮಾಡೋಣ. ಸುಳ್ಳು ಭರವಸೆ ನೀಡಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ವಿರುದ್ಧ ಹೋರಾಟ ಮಾಡೋಣ ಎಂದು ಬಿ.ವೈ. ವಿಜಯೇಂದ್ರ ಹೇಳಿದರು.

ಕಾರ್ಯಕ್ರಮದಲ್ಲಿ ಮಾತಾನಾಡಿ, ಸಂಸದ ಹಾಗೂ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪಿ.ಸಿ. ಮೋಹನ್ ಅವರ ಗೆಲುವನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ಹೇಳಿದರು.ಹಾಗೂ ಮೋದಿಯವರನ್ನು ಪ್ರಧಾನಿ ಆಗದಂತೆ ತಡೆಯಲು ಸಾಧ್ಯವಿಲ್ಲ ಎಂದರು.
ಶಾಸಕರಾದ ಎಸ್. ಸುರೇಶ್ ಕುಮಾರ್, ಎಸ್. ರಘು, ಮಂಜುಳಾ ಲಿಂಬಾವಳಿ, ಶರಣು ತಳ್ಳಿಕೇರಿ ಹಾಗೂ ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಸೇರಿದಂತೆ ಮಾಜಿ ಪಾಲಿಕೆ ಸದಸ್ಯರು, ಪದಾಧಿಕಾರಿಗಳು, ಕಾರ್ಯಕರ್ತರು ಭಾಗಿಯಾಗಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು