ಬೆಂಗಳೂರು: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ರಾಜೀನಾಮೆಯಿಂದ ತೆರವಾಗಿರುವ ವಿಧಾನ ಪರಿಷತ್‌ನ ಒಂದು ಸದಸ್ಯ ಸ್ಥಾನಕ್ಕೆ ಉಪ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಸಲ್ಲಿಕೆಗೆ ಜುಲೈ 2 ಕಡೆಯ ದಿನವಾಗಿದೆ.

ನಾಮಪತ್ರಗಳ ಪರಿಶೀಲನೆ ಜುಲೈ 3ರಂದು ನಡೆಯಲಿದ್ದು, ನಾಮಪತ್ರ ವಾಪಸ್‌ಗೆ ಜುಲೈ 5ರವರೆಗೂ ಅವಕಾಶವಿದೆ. ಒಂದಕ್ಕಿಂತ ಹೆಚ್ಚು ಅಭ್ಯರ್ಥಿಗಳು ಕಣದಲ್ಲಿ ಉಳಿದರೆ ಜುಲೈ 12ರಂದು ಬೆಳಗ್ಗೆ 9ರಿಂದ ಸಂಜೆ ನಾಲ್ಕು ಗಂಟೆವರೆಗೆ ಮತದಾನ ನಡೆಯಲಿದೆ. ಅಂದೇ ಸಂಜೆ 5ರ ನಂತರ ಮತ ಎಣಿಕೆ ನಡೆದು ಫಲಿತಾಂಶ ಪ್ರಕಟಿಸಲಾಗುತ್ತದೆ.