ಬೆಂಗಳೂರು: ಜಾತಿ ಜನಗಣತಿಯನ್ನು ಯಾವುದೇ ಶಾಲಾ ಮಕ್ಕಳಿಂದ ತಯಾರಿಸಿಲ್ಲ. ಸಮೀಕ್ಷೆ ಬಗ್ಗೆ ಬರುತ್ತಿರುವ ಆಪಾದನೆಗಳು ಸುಳ್ಳು. ವೈಜ್ಞಾನಿಕವಾಗಿ ಈ ಸಮೀಕ್ಷೆಯನ್ನು ನಡೆಸಲಾಗಿದೆ ಎಂದು ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಸ್ಪಷ್ಟನೆ ನೀಡಿದರು.
ಶುಕ್ರವಾರ ನಗರದಲ್ಲಿ ರಾಜ್ಯ ಒಕ್ಕಲಿಗರ ಸಂಘದ ನಿಯೋಗವು ಅವರನ್ನು ಭೇಟಿ ಮಾಡಿ ಎಚ್.ಕಾಂತರಾಜ್ ಆಯೋಗದ ಜಾತಿ ಜನಗಣತಿ ವರದಿ ತಿರಸ್ಕರಿಸುವಂತೆ ಸಲ್ಲಿಸಿದ ಮನವಿ ಸ್ವೀಕರಿಸಿದ ಬಳಿಕ ಅವರು ಮಾತನಾಡಿದರು.
ಈ ವರದಿಯಲ್ಲಿ ಯಾವುದೇ ಸಮಾಜವನ್ನು ಒಡೆಯುವ ಕೆಲಸ ಮಾಡಿಲ್ಲ. ಕಾಂತರಾಜ್ ಆಯೋಗದ ವರದಿಯನ್ನು ಅಧಿಕಾರಿಗಳಿಂದ ಅಂಕಿ ಅಂಶಗಳನ್ನು ಕಲೆ ಹಾಕಿಸಿ ತಯಾರಿಸಲಾಗಿದೆ ಎಂದು ತಿಳಿಸಿದರು.