ಬೆಂಗಳೂರು: ಬೆಳ್ಳಂಬೆಳಗ್ಗೆ ನಗರದ 20ಕ್ಕೂ ಹೆಚ್ಚು ರೌಡಿಶೀಟರ್ ಗಳ ಮನೆ ಮೇಲೆ ಏಕಕಾಲಕ್ಕೆ ಸಿಸಿಬಿ ದಾಳಿ, ರೌಡಿ ಶೀಟರ್ ಗಳಿಗೆ ಶಾಕ್ ಕೊಟ್ಟಿದೆ. ವಾರೆಂಟ್ ಜಾರಿ ಮಾಡಿದ್ದರೂ ಸಹ ರೌಡಿ ಶೀಟರ್ಗಳು ನ್ಯಾಯಾಲಯಕ್ಕೆ ಹಾಜರಾಗದೇ ತೆಲೆ ಮರೆಸಿಕೊಂಡಿದ್ದರು. ಈ ಹಿನ್ನಲೆಯಲ್ಲಿ ಸಿಸಿಬಿ ರೌಡಿ ಶೀಟರ್ಗಳ ಮೇಲೆ ದಾಳಿ ಮಾಡಿದ್ದು, ಮನೆಯಲ್ಲಿ ಲಾಂಗ್ ,ಮಚ್ಚು,ದಾಖಲೆ ಪತ್ರಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ರೌಡಿಶೀಟರ್ ರಮೇಶ್ ಅಲಿಯಾಸ್ ,ಜಗದೀಶ್ ಅಲಿಯಾಸ್ ಟಾಮಿ ಸೇರಿದಂತೆ ನಗರದಾದ್ಯಂತ ಇರುವ 20ಕ್ಕೂ ಹೆಚ್ಚು ನಟೋರಿಯಸ್ ರೌಡಿಗಳ ಮನೆ ಮೇಲೆ ದಾಳಿ ಮಾಡಿದ್ದಾರೆ.