ಬೆಂಗಳೂರು: ಕೇರಳದಲ್ಲಿ ಕೊರೊನಾ ವೈರಸ್ ರೂಪಾಂತರಿ ಜೆಎನ್.1 ಪ್ರಕರಣ ಹೆಚ್ಚಳ ಹಿನ್ನಲೆ ಕೇಂದ್ರ ಸರ್ಕಾರ ಕೊವಿಡ್ ಗೈಡ್ಲೈನ್ಸ್ ಬಿಡುಗಡೆ ಮಾಡಿದೆ. ಮುಂಬರುವ ಹಬ್ಬಗಳ ಮೇಲೆ ನಿಗಾ ವಹಿಸಬೇಕು. ಪ್ರತಿ ಜಿಲ್ಲೆ ಮತ್ತು ನಗರಗಳಲ್ಲಿ ಆರ್ಟಿಪಿಸಿಆರ್, ರ್ಯಾಪಿಡ್ ಆಂಟಿಜೆನ್ ಟೆಸ್ಟ್ ಮಾಡಲು ಹೇಳಿದೆ. ಎಲ್ಲಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ರಾಜ್ಯಗಳಿಗೆ ಸೂಚನೆ ನೀಡಲಾಗಿದೆ.
ಹೆಚ್ಚಿನ ಸಂಖ್ಯೆಯ RT-PCR ಪರೀಕ್ಷೆ ಮಾಡುವುದದು ಮತ್ತು ಜೀನೋಮ್ ಅನುಕ್ರಮಕ್ಕಾಗಿ ಧನಾತ್ಮಕ ಮಾದರಿಗಳನ್ನು ಭಾರತೀಯ SARS COV-2 ಜೀನೋಮಿಕ್ಸ್ ಕನ್ಸೋರ್ಟಿಯಮ್ ಪ್ರಯೋಗಾಲಯಗಳಿಗೆ ಕಳುಹಿಸಿ, ಇದರಿಂದಾಗಿ ದೇಶದಲ್ಲಿ ಯಾವುದಾದರೂ ಹೊಸ ರೂಪಾಂತರಗಳನ್ನು ಸಮಯೋಚಿತವಾಗಿ ಪತ್ತೆಹಚ್ಚಲು ಸಾಧ್ಯವಾಗುತ್ತದೆ.
ಐಎಲ್ಐ, ಸ್ಯಾರಿ ಕೇಸ್ಗಳ ಮೇಲೆ ನಿಗಾ ಇಡಲು ಚಿಕಿತ್ಸೆ ಬೇಕಾದ ಮೂಲ ಸೌಕರ್ಯ ಕ್ರೋಢೀಕರಣ. ಆರ್ಟಿಪಿಸಿಆರ್ ಪಾಸಿಟಿವ್ ಬಂದರೆ ಜೆನೆಮಿಕ್ ಸೀಕ್ವೆನ್ಸ್ಗೆ ಸ್ಯಾಂಪಲ್ ಕಳಿಸಬೇಕು. ಆ ಮೂಲಕ ಕೋವಿಡ್ ರೂಲ್ಸ್ ನಿರ್ಧಾರ ರಾಜ್ಯಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯ ಹೊಣೆ ಎಂದು ಕೇಂದ್ರ ಸರ್ಕಾರ ಹೇಳಿದೆ.