News Karnataka Kannada
Sunday, April 28 2024
ಬೆಂಗಳೂರು

ಸಾಲು ಮರದ ತಿಮ್ಮಕ್ಕನ ಕಾರು ಬಳಕೆ ಮಾಡಿದ್ದ ಚೈತ್ರಾ ಕುಂದಾಪುರ

Chaitra Kundapura used Saalumarada Thimmakka's car
Photo Credit : News Kannada

ಬೆಂಗಳೂರು: ವಂಚನೆ ಪ್ರಕರಣದಲ್ಲಿ ಚೈತ್ರಾ, ಗಗನ್ ಗ್ಯಾಂಗ್​ ಸಾಲುಮರದ ತಿಮ್ಮಕ್ಕಗೆ ನೀಡಿದ್ದ ಸಚಿವ ಸಂಪುಟ ದರ್ಜೆ ಸ್ಥಾನಮಾನವನ್ನೇ ದುರ್ಬಳಕೆ ಮಾಡಿಕೊಂಡಿದ್ದಾರೆ ಎನ್ನುವ ಸ್ಫೋಟಕ ಅಂಶ ಬಯಲಿಗೆ ಬಂದಿದೆ.

ಸಾಲುಮರದ ತಿಮ್ಮಕ್ಕನಿಗೆ ನೀಡಿರುವ ಸಚಿವ ಸಂಪುಟ ದರ್ಜೆಯ ಸ್ಥಾನಮಾನ ದುರ್ಬಳಕೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸಾಲುಮರದ ತಿಮ್ಮಕ್ಕಗೆ ಸರ್ಕಾರ ನೀಡಿರುವ ಸರ್ಕಾರಿ ಕಾರು, ಸರ್ಕಾರಿ ಸೌಲಭ್ಯಗಳನ್ನು ಚೈತ್ರಾ, ಗಗನ್ ಗ್ಯಾಂಗ್ ದುರ್ಬಳಕೆ ಮಾಡಿಕೊಂಡಿದೆ ಎನ್ನಲಾಗಿದೆ. ನಕಲಿ ಕೇಂದ್ರ ಚುನಾವಣಾ ಸಮಿತಿ ಸದಸ್ಯ ಚನ್ನಾನಾಯ್ಕ್ ಬಳಸಿದ್ದ ಸರ್ಕಾರಿ ಕಾರು ಸಾಲುಮರದ ತಿಮ್ಮಕ್ಕನಿಗೆ ನೀಡಿದ್ದ ಸರ್ಕಾರಿ ಕಾರು ಎಂದು ತಿಳಿದು ಬಂದಿದೆ.

ಕುಮಾರ ಕೃಪ ಗೆಸ್ಟ್ ಹೌಸ್ ನಲ್ಲಿ ರೂಮ್ , ವಿಧಾನಸೌಧಕ್ಕೆ ಪ್ರವೇಶಿಸಲು ನಕಲಿ ಕೇಂದ್ರ ಚುನಾವಣಾ ಸಮಿತಿ ಸದಸ್ಯ ಚನ್ನಾನಾಯ್ಕ್ ತಿಮ್ಮಕ್ಕ ಅವರಿಗೆ ನೀಡಿದ್ದ ಸರ್ಕಾರಿ ಕಾರು ಎನ್ನುವುದು ಗೊತ್ತಾಗಿದೆ. ಗೋವಿಂದ ಬಾಬು ಪೂಜಾರಿಯನ್ನ ನಂಬಿಸಲು ಸರ್ಕಾರಿ ಕಾರು ಬಳಕೆ ಮಾಡಿದ್ದಾರೆ ಎಂದು ಎನ್ನಲಾಗಿದೆ.

ಆರೋಪಿ ಗಗನ್ ಕಡೂರು, ಸಾಲುಮರದ ತಿಮ್ಮಕ್ಕನ ಪುತ್ರ ಉಮೇಶ್ ಜೊತೆ ಆತ್ಮೀಯ. ಉಮೇಶ್, ಸಾಲುಮರದ ತಿಮ್ಮಕ್ಕನ ಜೊತೆ ಗಗನ್ ಕಡೂರು ಮದುವೆಗೆ ಬಂದಿದ್ದ. ಅಷ್ಟೊಂದು ಇಬ್ಬರ ಮಧ್ಯೆ ಆತ್ಮೀಯತೆ ಇದೆ. ಹೀಗಾಗಿ ಉಮೇಶ್ ಸ್ನೇಹ ಬಳಸಿ ಸಾಲುಮರದ ತಿಮ್ಮಕ್ಕನಿಗೆ ನೀಡಿರುವ ಸಂಪೂರ್ಣ ದರ್ಜೆ ಸ್ಥಾನಮಾನ ದುರ್ಬಳಕೆ ಮಾಡಿರುವ ಶಂಕಿಸಲಾಗಿದೆ.

ವಿಧಾನಸೌಧದ ಸಾಲುಮರದ ತಿಮ್ಮಕ್ಕನಿಗೆ ನೀಡಿರುವ ಕೊಠಡಿಯ ನವೀಕರಣದ ಸಂಪೂರ್ಣ ಜವಾಬ್ದಾರಿಯನ್ನು ಗಗನ್ ಕಡೂರು ಹೊತ್ತುಕೊಂಡಿದ್ದ. ಅಲ್ಲದೇ ಸಾಲುಮರದ ತಿಮ್ಮಕ್ಕ ಪುತ್ರ ಉಮೇಶ್​, ಗೃಹ ಸಚಿವ ಜಿ.ಪರಮೇಶ್ವರ್​ಗೆ ಆಪ್ತರಾಗಿದ್ದು, ಕಳೆದ ಚುನಾವಣೆಯಲ್ಲಿ ಅವರ ಪ್ರಚಾರ ಮಾಡಿದ್ದರು. ಗಗನ್ ಸಹ ಪರಮೇಶ್ವರ್ ಪರ ಚುನಾವಣಾ ಪ್ರಚಾರಕ್ಕೂ ಉಮೇಶ್ ಜೊತೆ ತೆರಳಿದ್ದ ಎನ್ನುವುದು ಗೊತ್ತಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು