ಬೆಂಗಳೂರು: ವಂಚನೆ ಪ್ರಕರಣದಲ್ಲಿ ಚೈತ್ರಾ, ಗಗನ್ ಗ್ಯಾಂಗ್ ಸಾಲುಮರದ ತಿಮ್ಮಕ್ಕಗೆ ನೀಡಿದ್ದ ಸಚಿವ ಸಂಪುಟ ದರ್ಜೆ ಸ್ಥಾನಮಾನವನ್ನೇ ದುರ್ಬಳಕೆ ಮಾಡಿಕೊಂಡಿದ್ದಾರೆ ಎನ್ನುವ ಸ್ಫೋಟಕ ಅಂಶ ಬಯಲಿಗೆ ಬಂದಿದೆ.
ಸಾಲುಮರದ ತಿಮ್ಮಕ್ಕನಿಗೆ ನೀಡಿರುವ ಸಚಿವ ಸಂಪುಟ ದರ್ಜೆಯ ಸ್ಥಾನಮಾನ ದುರ್ಬಳಕೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸಾಲುಮರದ ತಿಮ್ಮಕ್ಕಗೆ ಸರ್ಕಾರ ನೀಡಿರುವ ಸರ್ಕಾರಿ ಕಾರು, ಸರ್ಕಾರಿ ಸೌಲಭ್ಯಗಳನ್ನು ಚೈತ್ರಾ, ಗಗನ್ ಗ್ಯಾಂಗ್ ದುರ್ಬಳಕೆ ಮಾಡಿಕೊಂಡಿದೆ ಎನ್ನಲಾಗಿದೆ. ನಕಲಿ ಕೇಂದ್ರ ಚುನಾವಣಾ ಸಮಿತಿ ಸದಸ್ಯ ಚನ್ನಾನಾಯ್ಕ್ ಬಳಸಿದ್ದ ಸರ್ಕಾರಿ ಕಾರು ಸಾಲುಮರದ ತಿಮ್ಮಕ್ಕನಿಗೆ ನೀಡಿದ್ದ ಸರ್ಕಾರಿ ಕಾರು ಎಂದು ತಿಳಿದು ಬಂದಿದೆ.
ಕುಮಾರ ಕೃಪ ಗೆಸ್ಟ್ ಹೌಸ್ ನಲ್ಲಿ ರೂಮ್ , ವಿಧಾನಸೌಧಕ್ಕೆ ಪ್ರವೇಶಿಸಲು ನಕಲಿ ಕೇಂದ್ರ ಚುನಾವಣಾ ಸಮಿತಿ ಸದಸ್ಯ ಚನ್ನಾನಾಯ್ಕ್ ತಿಮ್ಮಕ್ಕ ಅವರಿಗೆ ನೀಡಿದ್ದ ಸರ್ಕಾರಿ ಕಾರು ಎನ್ನುವುದು ಗೊತ್ತಾಗಿದೆ. ಗೋವಿಂದ ಬಾಬು ಪೂಜಾರಿಯನ್ನ ನಂಬಿಸಲು ಸರ್ಕಾರಿ ಕಾರು ಬಳಕೆ ಮಾಡಿದ್ದಾರೆ ಎಂದು ಎನ್ನಲಾಗಿದೆ.
ಆರೋಪಿ ಗಗನ್ ಕಡೂರು, ಸಾಲುಮರದ ತಿಮ್ಮಕ್ಕನ ಪುತ್ರ ಉಮೇಶ್ ಜೊತೆ ಆತ್ಮೀಯ. ಉಮೇಶ್, ಸಾಲುಮರದ ತಿಮ್ಮಕ್ಕನ ಜೊತೆ ಗಗನ್ ಕಡೂರು ಮದುವೆಗೆ ಬಂದಿದ್ದ. ಅಷ್ಟೊಂದು ಇಬ್ಬರ ಮಧ್ಯೆ ಆತ್ಮೀಯತೆ ಇದೆ. ಹೀಗಾಗಿ ಉಮೇಶ್ ಸ್ನೇಹ ಬಳಸಿ ಸಾಲುಮರದ ತಿಮ್ಮಕ್ಕನಿಗೆ ನೀಡಿರುವ ಸಂಪೂರ್ಣ ದರ್ಜೆ ಸ್ಥಾನಮಾನ ದುರ್ಬಳಕೆ ಮಾಡಿರುವ ಶಂಕಿಸಲಾಗಿದೆ.
ವಿಧಾನಸೌಧದ ಸಾಲುಮರದ ತಿಮ್ಮಕ್ಕನಿಗೆ ನೀಡಿರುವ ಕೊಠಡಿಯ ನವೀಕರಣದ ಸಂಪೂರ್ಣ ಜವಾಬ್ದಾರಿಯನ್ನು ಗಗನ್ ಕಡೂರು ಹೊತ್ತುಕೊಂಡಿದ್ದ. ಅಲ್ಲದೇ ಸಾಲುಮರದ ತಿಮ್ಮಕ್ಕ ಪುತ್ರ ಉಮೇಶ್, ಗೃಹ ಸಚಿವ ಜಿ.ಪರಮೇಶ್ವರ್ಗೆ ಆಪ್ತರಾಗಿದ್ದು, ಕಳೆದ ಚುನಾವಣೆಯಲ್ಲಿ ಅವರ ಪ್ರಚಾರ ಮಾಡಿದ್ದರು. ಗಗನ್ ಸಹ ಪರಮೇಶ್ವರ್ ಪರ ಚುನಾವಣಾ ಪ್ರಚಾರಕ್ಕೂ ಉಮೇಶ್ ಜೊತೆ ತೆರಳಿದ್ದ ಎನ್ನುವುದು ಗೊತ್ತಾಗಿದೆ.
ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್…
ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…
ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…
ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.
ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…
ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…