ಬೆಂಗಳೂರು: ಚಂದ್ರಯಾನ 3 ಉಡ್ಡಯನ ವಾಹನ ತಯಾರಿ ಮಾಡಿದ ಎಂಜಿನಿಯರ್ ಗಳಿಗೆ 17 ತಿಂಗಳಿನಿಂದ ವೇತನ ಪಾವತಿಯಾಗಿಲ್ಲ ಎಂದು ಕಾಂಗ್ರೆಸ್ ಆರೋಪಿಸಿದೆ.
ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್, ರಾಂಚಿಯ ಹಿಂದೂಸ್ತಾನ್ ಇಂಜಿನಿಯರಿಂಗ್ ಕಾರ್ಪೋರೇಶನ್ ಚಂದ್ರಯಾನ ಉಡ್ಡಯನ ವಾಹನ ತಯಾರಿಸಿದ್ದು, ಇದರ ಇಂಜಿನಿಯರ್ಗಳಿಗೆ ವೇತನ ಪಾವತಿಯಾಗಿಲ್ಲ ಎಂದು ಹೇಳಿದ್ದಾರೆ.
ಈ ಕುರಿತು ಮಾಧ್ಯಮ ವರದಿಗಳನ್ನು ಉಲ್ಲೇಖಿಸಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಈ ಆರೋಪ ಮಾಡಿದ್ದಾರೆ. ಇಸ್ರೋ ಅಧ್ಯಕ್ಷರ ತಂಡದ ಸಾಧನೆ ನಿಜಕ್ಕೂ ಶ್ಲಾಘನೀಯ. ಸೋಮನಾಥ್ ಅವರ ತಂಡದ ಕಾರ್ಯವೈಖರಿಗೆ ಜಗತ್ತಿಗೆ ಮಾದರಿ. ಆದರೆ ಕಪಟತನ ತೋರಿರುವ ಪ್ರಧಾನಿ ಮೋದಿ ಉತ್ತರ ನೀಡಬೇಕು ಎಂದು ವೇಣುಗೋಪಾಲ್ ಆಗ್ರಹಿಸಿದ್ದಾರೆ.
ಚಂದ್ರನ ಮೇಲ್ಮೈಯಲ್ಲಿ ವಿಕ್ರಮ್ ಲ್ಯಾಂಡ್ ಆದ ತಕ್ಷಣ ಕಾಣಿಸಿಕೊಂಡ ಪ್ರಧಾನಿ ಮೋದಿ ವಿಜ್ಞಾನಿಗಳ ಸಾಧನೆಯ ಶ್ರೇಯಸ್ಸು ಪಡೆಯಲು ಯತ್ನಿಸಿದ್ದಾರೆ. ಆದರೆ ಇಸ್ರೋ ಮತ್ತು ವಿಜ್ಞಾನಿಗಳಿಗೆ ನೆರವು ನೀಡುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ. ಮುಂದುವರಿದು ಚಂದ್ರಯಾನ 3 ರ ಬಜೆಟ್ ಅನ್ನು ಶೇ 32 ರಷ್ಟು ಕಡಿತಗೊಳಿಸಿದ್ದೇಕೆ ಎಂದು ಪ್ರಶ್ನಿಸಿದ್ದಾರೆ. ವಿಜ್ಞಾನಿಗಳು ದೇಶದ ನೈಜ ಹೀರೋಗಳು ಅವರ ಶ್ರಮ ಮತ್ತು ಪ್ರತಿಭೆ ಕುರಿತು ನಿಮಗೆ ಯಾವುದೇ ಗೌರವ ಇಲ್ಲ ಎಂದು ಹೇಳಿದ್ದಾರೆ.
The excitement and pride of the #Chandrayaan3 landing will stay with us for a long time. ISRO Chairman Dr. Somanath’s leadership truly created history and we extend our hearty congratulations to him and his team.
However, the PM must answer some for his hypocrisy.
You were… pic.twitter.com/USwpJbtx2l
— K C Venugopal (@kcvenugopalmp) August 24, 2023