News Karnataka Kannada
Saturday, May 04 2024
ಬೆಂಗಳೂರು

ಚಂದ್ರಯಾನ 3 ಇಂಜಿನಿಯರ್‌ ಗಳಿಗೆ 17 ತಿಂಗಳಿನಿಂದ ಸಂಬಳ ಇಲ್ಲ: ಕಾಂಗ್ರೆಸ್‌ ಆರೋಪ

Chandrayaan-3 engineers not paid salaries for 17 months: Congress
Photo Credit : Facebook

ಬೆಂಗಳೂರು: ಚಂದ್ರಯಾನ 3 ಉಡ್ಡಯನ ವಾಹನ ತಯಾರಿ ಮಾಡಿದ ಎಂಜಿನಿಯರ್‌ ಗಳಿಗೆ 17 ತಿಂಗಳಿನಿಂದ ವೇತನ ಪಾವತಿಯಾಗಿಲ್ಲ ಎಂದು ಕಾಂಗ್ರೆಸ್‌ ಆರೋಪಿಸಿದೆ.

ಈ ಕುರಿತು ಟ್ವೀಟ್‌ ಮಾಡಿರುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್‌, ರಾಂಚಿಯ ಹಿಂದೂಸ್ತಾನ್‌ ಇಂಜಿನಿಯರಿಂಗ್‌ ಕಾರ್ಪೋರೇಶನ್‌ ಚಂದ್ರಯಾನ ಉಡ್ಡಯನ ವಾಹನ ತಯಾರಿಸಿದ್ದು, ಇದರ ಇಂಜಿನಿಯರ್‌ಗಳಿಗೆ ವೇತನ ಪಾವತಿಯಾಗಿಲ್ಲ ಎಂದು ಹೇಳಿದ್ದಾರೆ.

ಈ ಕುರಿತು ಮಾಧ್ಯಮ ವರದಿಗಳನ್ನು ಉಲ್ಲೇಖಿಸಿ ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಈ ಆರೋಪ ಮಾಡಿದ್ದಾರೆ. ಇಸ್ರೋ ಅಧ್ಯಕ್ಷರ ತಂಡದ ಸಾಧನೆ ನಿಜಕ್ಕೂ ಶ್ಲಾಘನೀಯ. ಸೋಮನಾಥ್‌ ಅವರ ತಂಡದ ಕಾರ್ಯವೈಖರಿಗೆ ಜಗತ್ತಿಗೆ ಮಾದರಿ. ಆದರೆ ಕಪಟತನ ತೋರಿರುವ ಪ್ರಧಾನಿ ಮೋದಿ ಉತ್ತರ ನೀಡಬೇಕು ಎಂದು ವೇಣುಗೋಪಾಲ್‌ ಆಗ್ರಹಿಸಿದ್ದಾರೆ.

ಚಂದ್ರನ ಮೇಲ್ಮೈಯಲ್ಲಿ ವಿಕ್ರಮ್‌ ಲ್ಯಾಂಡ್‌ ಆದ ತಕ್ಷಣ ಕಾಣಿಸಿಕೊಂಡ ಪ್ರಧಾನಿ ಮೋದಿ ವಿಜ್ಞಾನಿಗಳ ಸಾಧನೆಯ ಶ್ರೇಯಸ್ಸು ಪಡೆಯಲು ಯತ್ನಿಸಿದ್ದಾರೆ. ಆದರೆ ಇಸ್ರೋ ಮತ್ತು ವಿಜ್ಞಾನಿಗಳಿಗೆ ನೆರವು ನೀಡುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ. ಮುಂದುವರಿದು ಚಂದ್ರಯಾನ 3 ರ ಬಜೆಟ್‌ ಅನ್ನು ಶೇ 32 ರಷ್ಟು ಕಡಿತಗೊಳಿಸಿದ್ದೇಕೆ ಎಂದು ಪ್ರಶ್ನಿಸಿದ್ದಾರೆ. ವಿಜ್ಞಾನಿಗಳು ದೇಶದ ನೈಜ ಹೀರೋಗಳು ಅವರ ಶ್ರಮ ಮತ್ತು ಪ್ರತಿಭೆ ಕುರಿತು ನಿಮಗೆ ಯಾವುದೇ ಗೌರವ ಇಲ್ಲ ಎಂದು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು