ಬೆಂಗಳೂರು: ಚೈತ್ರಾ ಕುಂದಾಪುರ ವಿರುದ್ಧದ ವಂಚನೆ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಸಿಸಿಬಿ ಅಧಿಕಾರಿಗಳು ತನಿಖೆಯನ್ನು ಮುಂದುವರಿಸಿದ್ದಾರೆ. ಇದೀಗ ಸಿಕ್ಕಿರುವ ಮಾಹಿತಿ ಪ್ರಕಾರ, ಪ್ರಕರಣಲದಲ್ಲಿ ಸುಮಾರು 3 ಕೋಟಿಯಷ್ಟು ಮೌಲ್ಯದ ನಗದು ಹಾಗೂ ಚಿನ್ನವನ್ನು ಸಿಸಿಬಿ ಜಪ್ತಿ ಮಾಡಿದೆ.
ಆರೋಪಿ ಚೈತ್ರಾ ಕುಂದಾಪುರ ತನ್ನ ಸಂಬಂಧಿಕರ ಹೆಸರಲ್ಲಿ ಖಾಸಗಿ ಬ್ಯಾಂಕ್ನಲ್ಲಿ ಇಟ್ಟಿದ್ದ 1.8 ಕೋಟಿ ಠೇವಣಿ ಪತ್ರವನ್ನು ಜಪ್ತಿ ಮಾಡಲಾಗಿದ್ಯಂತೆ. ಜೊತೆಗೆ ಚೈತ್ರಾ ಮನೆಯಲ್ಲಿದ್ದ ಸುಮಾರು 65 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಿದರೆ ಬ್ಯಾಂಕ್ನಲ್ಲಿಟ್ಟಿದ್ದ 40 ಲಕ್ಷ, ಆರೋಪಿ ಶ್ರೀಕಾಂತ್ ಮನೆಯಲ್ಲಿ 45 ಲಕ್ಷವನ್ನು ವಶಕ್ಕೆ ಪಡೆಯಲಾಗಿದೆ ಎನ್ನಲಾಗಿದೆ.
ಹಾಲಶ್ರೀಗೆ ಈಗಾಗಲೇ 50 ಲಕ್ಷ ರೂಪಾಯಿಯನ್ನು ಗೋವಿಂದ ಪೂಜಾರಿಗೆ ಹಿಂದಿರುಗಿಸಿದ್ದು ಉಳಿದ ಹಣಕ್ಕಾಗಿ ಸಿಸಿಬಿ ಪೊಲೀಸರು ಹುಡುಕಾಟ ನಡೆಸಿದ್ದಾರೆ ಎಂದು ವರದಿಯಾಗಿದೆ.