ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯ ಚರಕಮಟ್ಟೇನಹಳ್ಳಿ ಗ್ರಾಮದಲ್ಲಿ ಅಕ್ರಮ ವಿದ್ಯುತ್ ಬೇಲಿಗೆ ರೈತರೊಬ್ಬರು ಬಲಿಯಾಗಿದ್ದು, ರೈತನ ಸಾವಿಗೆ ಕಾರಣರಾದ ಆ ಜಮೀನು ಮಾಲೀಕನನ್ನು ಸ್ಥಳೀಯರು ಹೊಡೆದು ಕೊಂದಿರುವ ಘಟನೆ ನಡೆದಿದೆ.
ವಸಂತರಾವ್ ಸಾವಿಗೆ ಅಕ್ರಮವಾಗಿ ವಿದ್ಯುತ್ ತಂತಿ ಬೇಲಿ ಅಳವಡಿಸಿದ್ದ ಜಮೀನು ಮಾಲೀಕ ಕಾರಣ ಎಂದು ಆರೋಪಿಸಿ ಜಮೀನು ಮಾಲೀಕ ಅಶ್ವತ್ಥ ರಾವ್ ಮೇಲೆ ಮಾರಣಾಂತಿಕವಾಗಿ ಹೊಡೆದು ಹಲ್ಲೆ ಮಾಡಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಅಶ್ವತ್ಥ್ ರಾವ್ ದೊಡ್ಡಬಳ್ಳಾಪುರದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಚರಕಮಟ್ಟೇನಹಳ್ಳಿ ಗ್ರಾಮದ ರೈತ ವಸಂತರಾವ್ ವಿದ್ಯುತ್ ಬೇಲಿಗೆ ಬಲಿಯಾದ ರೈತ.
ಜಮೀನು ಮಾಲೀಕ ಅಶ್ವತ್ಥ ರಾವ್ ಚಿಕ್ಕಬಳ್ಳಾಫುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಚಿಕ್ಕಹನುಮೇನಹಳ್ಳಿ ನಿವಾಸಿ ಎನ್ನಲಾಗಿದ್ದು, ಘಟನಾ ಸ್ಥಳಕ್ಕೆ ಮಂಚೇನಹಳ್ಳಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.