News Karnataka Kannada
Monday, April 29 2024
ಚಿಕ್ಕಬಳ್ಳಾಪುರ

ಕಾಂಗ್ರೆಸ್ ಕಾರ್ಯಕರ್ತನ ಹಲ್ಲೆ ಪ್ರಕರಣ : ಪೊಲೀಸ್ ಠಾಣೆಗೆ ಮುತ್ತಿಗೆ

Janaspandana Sabha at Keravadi, lays foundation stone for works worth Rs 2 crore
Photo Credit :

ಚಿಕ್ಕಬಳ್ಳಾಪುರ: ಕಾಂಗ್ರೆಸ್ ಕಾರ್ಯಕರ್ತ ಸಂತೋಷ್ ಮೇಲೆ ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ನಗರ ಠಾಣೆಗೆ ಮುತ್ತಿಗೆ ಹಾಕಿದ್ದಾರೆ. ಠಾಣೆ ಮುಂಭಾಗದ ಗೌರಿಬಿದನೂರು ಚಿಕ್ಕಬಳ್ಳಾಪುರ ರಸ್ತೆಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಮೇ 14 ಮತ್ತು 15 ರಂದು ನಗರದಲ್ಲಿ ಸಚಿವ ಡಾ.ಕೆ.ಸುಧಾಕರ್ ನೇತೃತ್ವದಲ್ಲಿ ಆರೋಗ್ಯ ಮೇಳ ಹಮ್ಮಿಕೊಳ್ಳಲಾಗಿದೆ. ಎಚ್.ಎನ್.ವ್ಯಾಲಿ ಕೊಳಚೆ ನೀರು ಕುಡಿಸಿ ಈಗ ರಕ್ತ ಪರೀಕ್ಷೆ ಮಾಡಿಸುತ್ತಿದ್ದಾರೆ ಎಂದು ಸಂತೋಷ್ ಹೇಳಿದ್ದರು. ಇದನ್ನು ಅನಿಲ್ ಎಂಬುವವರು ವಿಡಿಯೊ ಮಾಡಿದ್ದಾರೆ.

ಸಚಿವ ಸುಧಾಕರ್ ಅಣತಿಯಂತೆ ಪೊಲೀಸರು ನಡೆದುಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು ಆರೋಪಿಸಿದರು. ಸಚಿವ ಸುಧಾಕರ್ ಅಯೋಗ್ಯ ಎಂದು ಟೀಕಿಸಿದರು.

ಡಾ.ಕೆ.ಸುಧಾಕರ್ ದ್ದು ಹಿಟ್ಲರ್ ಆಡಳಿತ ಎಂದು ಟೀಕಿಸಿದರು. ಭ್ರಷ್ಟ ಸುಧಾಕರ ಗೆ ಧಿಕ್ಕಾರ, ಚೇಲಾಗಳ ಕೈಯಲ್ಲಿ ದೂರು ಕೊಡಿಸುವ ಸುಧಾಕರ ಗೆ ಧಿಕ್ಕಾರ ಎಂದು ಘೋಷಣೆ ಕೂಗಿದರು.

ಇತ್ತೀಚೆಗೆ ಪರಿಶಿಷ್ಟ ಸಮುದಾಯಕ್ಕೆ ಸೇರಿದ ಕಾಂಗ್ರೆಸ್ ಪಕ್ಷದ ಮೂವರು ಮಾಜಿ ಶಾಸಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದರು. ಪ್ರಕರಣ ದ ಹಿಂದೆ ಸುಧಾಕರ್ ಇದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತ ರು ಪ್ರತಿಭಟನೆ ಸಹ ನಡೆಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು