ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಸಾಮೂಹಿಕ ಆತ್ಮಹತ್ಯೆ ಯತ್ನ ಪ್ರಕರಣ ನಡೆದಿದ್ದು, ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ.ಜಿಲ್ಲೆಯ ಚಿಂತಾಮಣಿ ತಾಲೂಕಿನ ನಾರಾಯಣಹಳ್ಳಿಯಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು, ಬಾಲಕ ಮೃತಪಟ್ಟಿದ್ದಾನೆ. ಮಕ್ಕಳಿಬ್ಬರಿಗೆ ವಿಷವುಣಿಸಿ ದಂಪತಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಸದ್ಯ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಬಾಲಕ ಮುರಳಿ(14) ಸಾವನ್ನಪ್ಪಿದ್ದು, ಮಂಜುನಾಥ್(45), ಹನುಮಕ್ಕ(35), ಮನಿರಾಜು(20) ಅಸ್ವಸ್ಥರಾಗಿದ್ದಾರೆ.
ಅಸ್ವಸ್ಥರಾದ ಮೂವರನ್ನು ಹೊಸಕೋಟೆಯ ಆಸ್ಪತ್ರೆಗೆ ದಾಖಳಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಚಿಂತಾಮಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.