ಚಿಕ್ಕಬಳ್ಳಾಪುರ: ಕೋವಿಡ್ ಸೋಂಕು ಹೆಚ್ಚುವ ಸಂಭವಿದೆ ಎಂದು ಎರಡು ತಿಂಗಳ ಹಿಂದೆಯೇ ಶುಕ್ರವಾರ ಸಂಜೆ 6ರಿಂದ ಸೋಮವಾರ ಬೆಳಿಗ್ಗೆ 6ರವರೆಗೆ ನಂದಿಗಿರಿಧಾಮಕ್ಕೆ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
ನಂತರ ರಾಜ್ಯದ ಎಲ್ಲೆಡೆಯೂ ವಾರಾಂತ್ಯದ ನಿಷೇಧಾಜ್ಞೆ ಜಾರಿಯಾಯಿತು. ಈಗ ಈ ನಿಷೇಧಾಜ್ಞೆ ತೆರವಾಗಿದೆ. ಆದರೆ ಕೋವಿಡ್ ಭಯದ ಕಾರಣ ಗಿರಿಧಾಮಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ಅವಕಾಶ ನೀಡಿಲ್ಲ. ಭಾನುವಾರ ಗಿರಿಧಾಮಕ್ಕೆ ಬಂದ ಪ್ರವಾಸಿಗರನ್ನು ಪೊಲೀಸರು ವಾಪಸ್ ಕಳುಹಿಸಿದರು.
ಪ್ರವೇಶದಲ್ಲಿಯೇ ಬ್ಯಾರಿಕೇಡ್ಗಳನ್ನು ಅಳವಡಿಸಲಾಗಿತ್ತು.’ಸಾಮಾನ್ಯವಾಗಿ ಇಲ್ಲಿಗೆ ಪ್ರವಾಸಕ್ಕೆ ಬರುತ್ತೇವೆ. ವಾರಾಂತ್ಯದ ಕರ್ಫ್ಯೂ ಇಲ್ಲ ಎಂದು ತಿಳಿದು ಇಲ್ಲಿಗೆ ಬಂದಿದ್ದೆವು. ಆದರೆ ಇಲ್ಲಿ ನಿರ್ಬಂಧವಿದೆ. ಬೇಸರವಾಯಿತು. ಆದಷ್ಟು ಬೇಗ ಕರ್ಫ್ಯೂ ತೆರವಾಗಿ ನಂದಿ ಪ್ರವೇಶಕ್ಕೆ ಅವಕಾಶ ಮಾಡಿಕೊಡಬೇಕು’ ಎಂದು ಬೆಂಗಳೂರು ನಿವಾಸಿ ಸುಶಾಂತ್ ತಿಳಿಸಿದರು.