ಚಿಕ್ಕಬಳ್ಳಾಪುರ: ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಶುಶ್ರೂಷಕಿ ಅರುಣಾ (26) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆಕೆ ತಾಲ್ಲೂಕಿನ ಗುಂತಪನಹಳ್ಳಿ ಗ್ರಾಮದವರಾಗಿದ್ದು, ಕೌಟುಂಬಿಕ ಕಲಹದಿಂದ ಪತಿಯನ್ನು ತೊರೆದ ಬಳಿಕ ನಗರದಲ್ಲಿ ವಾಸವಾಗಿದ್ದರು.
ಈ ಬಗ್ಗೆ ಶುಶ್ರೂಷಕಿಯ ಪೋಷಕರು ಆಸ್ಪತ್ರೆಯ ‘ಡಿ’ ಗ್ರೂಪ್ ನೌಕರ ಶಿವಮೂರ್ತಿ ಎಂಬುವವರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.ಪೊಲೀಸರುಆತನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.