ಚಿಕ್ಕಬಳ್ಳಾಪುರ: ಪತ್ನಿಯ ಶೀಲ ಶಂಕಿಸಿ ಪತ್ನಿಯನ್ನ ಕತ್ತು ಹಿಸುಕಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ನಗರದ ಕೊರಚರಪೇಟೆಯಲ್ಲಿ ನಡೆದಿದೆ.
ಉತ್ತರ ಪ್ರದೇಶ ಮೂಲದ ಮಮತಾ ಕೊಲೆಯಾದ ಮಹಿಳೆಯಾಗಿದ್ದು, ಪತಿ ಅರವಿಂದ್ ಮಮತಾ ಶೀಲ ಶಂಕಿಸಿ ಕತ್ತು ಹಿಸುಕಿ ನೆಲಕ್ಕೆ ತಲೆ ಚಚ್ಚಿ ಕೊಲೆಗೈದಿದ್ದಾನೆ.
ದಂಪತಿ ಕೊರಚರಪೇಟೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಪತ್ನಿಯ ಶೀಲಶಂಕಿಸಿ ಅರವಿಂದ್ ಆಗಾಗ್ಗೆ ಗಲಾಟೆ ಮಾಡುತ್ತಿದ್ದ ಎನ್ನಲಾಗಿದೆ. ನಿನ್ನೆ ರಾತ್ರಿಯೂ ಇದೇ ಕಾರಣಕ್ಕೆ ದಂಪತಿ ನಡುವೆ ಜಗಳ ನಡೆದಿದ್ದು, ಪತ್ನಿಯ ತಲೆಯನ್ನು ನೆಲಕ್ಕೆ ಚಚ್ಚಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.