ಚಿಕ್ಕಬಳ್ಳಾಫುರ: ನಟ ಪುನೀತ್ ರಾಜ್ ಕುಮಾರ್ ಅಭಿಮಾನಿ ಬಳಗದಿಂದ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ. ಚಿಕ್ಕಬಳ್ಳಾಪುರ ನಗರದ ವಾಣಿ ಚಲನಚಿತ್ರ ಮಂದಿರಲ್ಲಿ ಅನ್ನದಾನ, ನೇತ್ರದಾನ, ರಕ್ತದಾನ ಶಿಬಿರ ಆಯೋಜಿಸಲಾಗಿದೆ.
ಬೆಳಿಗ್ಗೆ 9 ಗಂಟೆಯಿಂದ ಸಾಯಂಕಾಲದವರೆಗೂ ನಿರಂತರ ಅನ್ನಸಂತರ್ಪಣೆ ನಡೆಯಲಿದೆ. ಪವರ್ಸ್ಟಾರ್ ಪುನೀತ್ ರಾಜ್ಕುಮಾರ್, ಅಭಿಮಾನಿಗಳ ಪ್ರೀತಿಯ ಅಪ್ಪು ಜನ್ಮದಿನವಿಂದು.
ಅವರಿಲ್ಲ ಎಂಬ ಕೊರಗಿನಲ್ಲಿಯೇ ಅಪ್ಪು ನಾಯಕನಾಗಿ ನಟಿಸಿದ ಕೊನೆಯ ಚಿತ್ರ ‘ಜೇಮ್ಸ್’ ಇಂದು ತೆರೆಗೆ ಬಂದಿದೆ. ವಿಶ್ವಾದ್ಯಂತ ಪ್ರೇಕ್ಷಕರು ‘ಜೇಮ್ಸ್’ಗೆ ಭರ್ಜರಿ ಸ್ವಾಗತ ಕೋರುತ್ತಿದ್ದಾರೆ. ರಾಜ್ಯಾದ್ಯಂತ ಅಪ್ಪು ಅಭಿನಯದ ‘ಜೇಮ್ಸ್’ ಸಿನಿಮಾ ರಿಲೀಸ್ ಆಗಿದ್ದು, ಎಲ್ಲೆಡೆ ಹಬ್ಬದ ವಾತಾವರಣ ಮನೆಮಾಡಿದೆ. ಮಹಿಳಾ ಅಭಿಮಾನಿಗಳು ಪುಟ್ಟ ಮಕ್ಕಳ ಜತೆ ಸಿನಿಮಾ ವೀಕ್ಷಣೆಗೆ ಬಂದಿದ್ದಾರೆ. ಹಲವರು ಪುನೀತ್ ನೆನೆದು ಭಾವುಕರಾಗಿದ್ದಾರೆ. ರಾಜ್ಯದ ಹಲವು ಚಿತ್ರಮಂದಿರಗಳ ಬಳಿ ಅನ್ನದಾನ, ರಕ್ತದಾನ ಶಿಬಿರ ಏರ್ಪಡಿಸಲಾಗಿದೆ.