ಚಿಕ್ಕಬಳ್ಳಾಪುರ: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಜಿ.ವಿ.ಶ್ರೀರಾಮರೆಡ್ಡಿ ಹೃದಯಾಘಾತದಿಂದ ಅವರು ಕೊನೆಯುಸಿರೆಳೆದಿದ್ದಾರೆ.
ರಾಮರೆಡ್ಡಿ ಅವರು ಸಿಪಿಐಎಂ ಪಕ್ಷದಿಂದ ಶಾಸಕರಾಗಿದ್ದರು. ಸಿಪಿಐಎಂ ಪಕ್ಷದಿಂದ ಉಚ್ಚಾಟಿತರಾದ ನಂತರ ಪ್ರಜಾ ಸಂಘರ್ಷ ಸಮಿತಿ ಪಕ್ಷ ಸ್ಥಾಪನೆ ಮಾಡಿದ್ದರು.
ಬೆಳಗ್ಗೆ 4 ಗಂಟೆಗೆ ಶ್ರೀರಾಮರೆಡ್ಡಿ ಅವರಿಗೆ ತೀವ್ರ ಹೃದಯಾಘಾತವಾಗಿದೆ. ತಕ್ಷಣ ಅವರನ್ನು ಬಾಗೇಪಲ್ಲಿ ಸಾರ್ವಜನಿಕ ಆಸ್ಪತ್ರೆಗೆ ಅವರನ್ನು ದಾಖಲಿಸಿ, ಪ್ರಥಮ ಚಿಕಿತ್ಸೆ ಕೊಡಿಸಲಾಯಿತು.
ಆದರೆ, ಚಿಕಿತ್ಸೆ ಫಲಿಸದೇ ಬೆಳಗ್ಗೆ 7.28ಕ್ಕೆ ಮೃತಪಟ್ಟಿರುವುದಾಗಿ ತಾಲೂಕು ವೈದ್ಯಾಧಿಕಾರಿಗಳು ಘೋಷಿಸಿದರು.
ಶ್ರೀರಾಮರೆಡ್ಡಿ ಅವರ ನಿಧನಕ್ಕೆ ಅವರು ಬೆಂಬಲಿಗರ ಸಂತಾಪ ಸೂಚಿಸಿದ್ದಾರೆ. ಇಂದೇ ಅವರ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.