ಚಿಕ್ಕಬಳ್ಳಾಪುರ : ಬೀದಿ ನಾಯಿಗಳ ದಾಳಿಗೆ 11 ವರ್ಷದ ಬಾಲಕ ಭೀಕರವಾಗಿ ಸಾವನ್ನಪ್ಪಿರುವ ಘಟನೆ ಶಿಡ್ಲ್ಘಟ್ಟದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರದ ಖಲಂದರ್ ಖಾನ್ ಎಂಬ ಹುಡುಗ ಶಿಡ್ಲಘಟ್ಟದ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ 4ನೇ ತರಗತಿ ಓದುತ್ತಿದ್ದು. ಇಂದು ಬೆಳಿಗ್ಗೆ ಈತನ ಅಪ್ಪ ಕೂಲಿ ಕೆಲಸಕ್ಕೆ ಹೊರಗಡೆ ಹೋಗಿದ್ದರು ಎನ್ನಲಾಗಿದೆ.
ಈ ವೇಳೆ ಮನೆಯಿಂದ ಹೊರ ಬಂದಿದ್ದ ಬಾಲಕನ ಮೇಲೆ ಸುಮಾರು 20ಕ್ಕೂ ಹೆಚ್ಚು ನಾಯಿಗಳು ಭೀಕರವಾಗಿ ದಾಳಿ ನಡೆಸಿವೆ. ಈ ದಾಳಿಯನ್ನು ಎದುರಿಸಲು ಸಾಧ್ಯವಾಗದೆ ಅಸಹಾಯಕನಾದ ಬಾಲಕನ ಮೈ ಎಲ್ಲಾ ತೀವ್ರವಾಗಿ ಗಾಯಗಲಾಗಿದ್ದು. ಬಟ್ಟೆಯು ಇಲ್ಲದಂತೆ ನಗ್ನ ಸ್ಥಿತಿಯಲ್ಲಿ ಹಳ್ಳಿ ರಸ್ತೆಯಲ್ಲಿ ಬಿದ್ದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಹಳ್ಳಿಯ ಒರ್ವರು ನಾಯಿಗಳನ್ನು ಓಡಿಸುವ ವೇಳೆಗೆ ಬಾಲಕನ ಪ್ರಾಣ ಪಕ್ಷಿ ಹಾರಿಹೋಗಿತ್ತು.
ಈ ಘಟನೆಯ ನಂತರ ಸ್ಥಳಕ್ಕೆ ಬೇಟಿ ನೀಡಿದ ಗ್ರಾಮಸ್ಥರು ಮತ್ತು ನಗರ ಸಭಾ ಸದಸ್ಯರು ಈ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿಂದೆ ಸಂಬಂಧ ಪಟ್ಟ ಸ್ಥಳೀಯ ಆಡಳಿತಕ್ಕೆ ತಿಳಿಸಿದರೂ ಸೂಕ್ತ ಕ್ರಮಕೈಗೊಂಡಿಲ್ಲ ಎನ್ನಲಾಗಿದೆ. ಶಿಡ್ಲ್ಘಟ್ಟ ಪೊಲೀಸರು ಸ್ಥಳ ಮಹಜರು ನಡೆಸುತ್ತಿದ್ದು, ತಾಹಶಿಲ್ದಾರ್ ಬಿ.ಎಸ್ ರಾಜೀವ್ ಸ್ಥಳಕ್ಕೆ ಭೇಟಿ ನೀಡುವ ಸಾಧ್ಯತೆಗಳಿವೆ.