ಚಿಕ್ಕಮಗಳೂರು :ಬೈ ಕ್ ಮೇಲೆ ಅಗ್ನಿ ಶಾಮಕದಳದ ವಾಹನ ಹರಿದ ಪರಿಣಾಮ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಕೊಪ್ಪ ಪಟ್ಟಣ ಮುಖ್ಯರಸ್ತೆಯಲ್ಲಿ ನಡೆದಿದೆ.
ಶನಿವಾರ ಪಟ್ಟಣದ ದ್ಯಾವೇಗೌಡ ವೃತ್ತದಿಂದ ವಾಟರ್ ಟ್ಯಾಂಕ್ ವೃತ್ತದ ಕಡೆ ಸಾಗುತ್ತಿದ್ದ ಅಗ್ನಿ ಶಾಮಕದ ದಳದ ವಾಹನದ ಹಿಂಬದಿ ಚಕ್ರಕ್ಕೆ ಸ್ಕೂಟಿಯಲ್ಲಿದ್ದ ಮಹಿಳೆ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಮೃತ ದುರ್ದೈವಿ ಮುಮ್ತಾಜ್ (46) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಕೊಪ್ಪ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.