News Karnataka Kannada
Monday, April 29 2024
ಚಿಕ್ಕಬಳ್ಳಾಪುರ

ಮೃತಪಟ್ಟ ಗುಬ್ಬಚ್ಚಿಗೆ ಸಮಾಧಿ ಕಟ್ಟಿ ಶ್ರದ್ಧಾಂಜಲಿ ಸಲ್ಲಿಸಿದ ಬಸವಪಟ್ಟಣ ಗ್ರಾಮದ ಜನತೆ

Sparrow
Photo Credit : IANS

ಚಿಕ್ಕಬಳ್ಳಾಪುರ : ಜನರ ಜೊತೆ ‘ಆತ್ಮೀಯ’ವಾಗಿದ್ದ ಗುಬ್ಬಚ್ಚಿ ಮೃತಪಟ್ಟ ಹಿನ್ನೆಲೆ, ಪುಟ್ಟದಾದ ಸಮಾಧಿ ಕಟ್ಟಿ ಚಿಕ್ಕ ಮಕ್ಕಳಿಂದ ಹಿಡಿದು ಹಿರಿಯರವರೆಗೂ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ ಅಪರೂಪದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಬಸವಪಟ್ಟಣ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಜನರು ಪಕ್ಷಿಗಳನ್ನು ಹೆಚ್ಚು ಪ್ರೀತಿಸುತ್ತಾರೆ. ಅದರಲ್ಲೂ ಗುಬ್ಬಚ್ಚಿಗಳನ್ನು ಮನೆಯ ಕುಟುಂಬದ ಸದಸ್ಯರೆಂದು ಕಾಣುತ್ತಾರೆ. ಪ್ರತಿನಿತ್ಯ ಕೆಲಸ ಕಾರ್ಯಗಳಿಗೆ ತೆರಳುವ ಮುನ್ನ ಊರಿನ ಬಾಗಿಲಿನಲ್ಲಿ ಕೂತು ಗ್ರಾಮಸ್ಥರ ಮನ ಸೆಳೆಯುತ್ತಿದ್ದ ಈ ಗುಬ್ಬಚ್ಚಿ ಕೆಲ ದಿನಗಳ ಹಿಂದೆ ಇದ್ದಕ್ಕಿದಂತೆ ಕಾಣೆಯಾಗಿದ್ದು, ಗ್ರಾಮಸ್ಥರ ನಿದ್ದೆಗೆಡಿಸಿತ್ತು. ನಂತರ ಇದೇ ಗುಬ್ಬಚ್ಚಿ ಮರಣದ ಸುದ್ದಿ ಗ್ರಾಮಸ್ಥರ ನೋವಿಗೆ ಕಾಣವಾಗಿತ್ತು.

ಗ್ರಾಮಸ್ಥರು ಸೇರಿ ಗುಬ್ಬಚ್ಚಿಯ ಅಂತ್ಯಸಂಸ್ಕಾರ ಮಾಡಿದ್ದಾರೆ. ಸಮಾಧಿ ಕಟ್ಟಿದ್ದು 11ನೇ ದಿನದ ತಿಥಿ ಕಾರ್ಯದಲ್ಲಿ ಗ್ರಾಮದ ಮತ್ತು ಸುತ್ತಮುತ್ತಲಿನ ಜನಕ್ಕೂ ಊಟ ಹಾಕಿಸಿ ಪಕ್ಷಿ ಪ್ರೇಮ ಮೆರೆದಿದ್ದಾರೆ. ಇನ್ನೂ ಗ್ರಾಮದ ಹಲವೆಡೆ ಮತ್ತೆ ಹುಟ್ಟಿ ಬಾ ಗುಬ್ಬಚ್ಚಿ ಎಂದು ಬ್ಯಾನರ್ ಕಟ್ಟಿದ್ದಾರೆ. ಜೊತೆಗೆ ಪಕ್ಷಿಗಳನ್ನು ಸಂರಕ್ಷಿಸುವ ಅರಿವನ್ನು ಮೂಡಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು