ಚಿಕ್ಕಬಳ್ಳಾಪುರ: ಪರಿಸರವನ್ನು ಸಂರಕ್ಷಿಸುವ ಸಲುವಾಗಿ ತಮ್ಮ ಮನೆಗಳಲ್ಲಿ ಮತ್ತು ಸುತ್ತಮುತ್ತ ಸಸಿಗಳನ್ನು ನೆಟ್ಟು ಪೋಷಿಸುವುದು ತಮ್ಮ ಕರ್ತವ್ಯ ಎಂದು ಪ್ರತಿಯೊಬ್ಬರೂ ಭಾವಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ನಗರದ ಬಿ.ಬಿ.ರಸ್ತೆಯಲ್ಲಿ ಮಹಾನಗರ ಪಾಲಿಕೆ ವತಿಯಿಂದ ಸಸಿ ನೆಡುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೇವಲ ಘೋಷಣೆ ಕೂಗುವ ಮೂಲಕ ಪರಿಸರ ಸಂರಕ್ಷಣೆ ಮಾಡಲು ಸಾಧ್ಯವಿಲ್ಲ, ಸಮಾಜದ ಪ್ರತಿಯೊಬ್ಬರೂ ಪರಿಸರದ ಮಹತ್ವವನ್ನು ಅರಿತುಕೊಳ್ಳಬೇಕು ಎಂದರು. ಸಸಿಗಳನ್ನು ನೆಟ್ಟು ಅದನ್ನು ಪೋಷಿಸುವ ಕೆಲಸವನ್ನು ಮಾಡಿ ಎಂದರು.
ಪರಿಸರ ಸಂರಕ್ಷಣೆಗೆ ಎಲ್ಲರೂ ಸಂಕಲ್ಪ ಮಾಡಬೇಕೆಂದು ಸಚಿವರು ಮನವಿ ಮಾಡಿದರು.