News Karnataka Kannada
Sunday, May 05 2024
ಚಿಕ್ಕಬಳ್ಳಾಪುರ

ಸಾಲಗಾರನ ಕಿರುಕುಳ: ಡೆತ್​​ನೋಟ್ ಬರೆದಿಟ್ಟು ಪ್ರಾಣಬಿಟ್ಟ ಯುವಕ

Debtor harassment: Young man dies after writing suicide note
Photo Credit : News Kannada

ಚಿಕ್ಕಬಳ್ಳಾಪುರ: ಸಾಲಗಾರನ ಕಿರುಕುಳಕ್ಕೆ ಬೇಸತ್ತು ಯುವಕನೋರ್ವ ಡೆತ್​​ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಉಡಮಲೊಡು ಗ್ರಾಮದಲ್ಲಿ ನಡೆದಿದೆ. ಹೆಚ್.ಕೆ.ಪೃಥ್ವಿರಾಜ್(26) ಆತ್ಮಹತ್ಯೆಗೆ ಶರಣಾದ ಯುವಕ.

ಮನೆಯಲ್ಲೇ ಫ್ಯಾನ್​ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಡ್ಡಿ ಸಮೇತ ಕೈಸಾಲ ವಾಪಸ್ ನೀಡುವಂತೆ ಸ್ನೇಹಿತನ ಕಿರುಕುಳಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ.

ಇನ್ನು ವಿಷಯ ತಿಳಿದು ಸ್ಥಳಕ್ಕೆ ಗೌರಿಬಿದನೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದರು. ಡೆತ್​ನೋಟ್​ ಸಹ ಪತ್ತೆಯಾಗಿದ್ದು. ಈ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಸಹಾಯವಾಣಿಗೆ ಕರೆ ಮಾಡಿ:

ನೀವು ಆತ್ಮಹತ್ಯೆಯ ಯೋಚನೆ ಮಾಡುತ್ತಿದ್ದರೆ ಅಥವಾ ಅಂತವರ ಕುರಿತು ನಿಮಗೆ ತಿಳಿದಿದ್ದರೆ, ಸಹಾಯ ಅಗತ್ಯವಿರುವ ಯಾರಾದರೂ, ಕರೆ ಮಾಡಿ ಸುಶೇಗ್ ಚಾರಿಟೇಬಲ್ ಟ್ರಸ್ಟ್ 0824-2983444 ಗೆ ಏಕೆಂದರೆ ಪ್ರತಿಯೊಬ್ಬರ ಜೀವವು ಅಮೂಲ್ಯವಾದ್ದದ್ದು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು