News Karnataka Kannada
Thursday, May 02 2024
ಚಿಕ್ಕಬಳ್ಳಾಪುರ

ತೆಲಂಗಾಣದಲ್ಲಿ ಕರ್ನಾಟಕ ಶಾಸಕ ಪ್ರದೀಪ್‌ ಈಶ್ವರ್‌ ಪ್ರತಿಭಟನೆ ಮಾಡ್ತಿರೋದು ಯಾಕೆ ಗೊತ್ತಾ?

Do you know why Karnataka MLA Pradeep Easwar is protesting in Telangana?
Photo Credit : News Kannada

ಚಿಕ್ಕಬಳ್ಳಾಪುರ: ಕರ್ನಾಟಕದಲ್ಲಿ ಕಾಂಗ್ರೆಸ್‌ ಭರವಸೆಗಳ ಮೂಲಕವೇ ಅಧಿಕಾರದ ಗದ್ದುಗೆ ಹಿಡಿದಿರುವುದು ಎಲ್ಲರಿಗೂ ತಿಳಿದಿರುವ ವಿಚಾರ. ಅದೇ ರೀತಿ ತೆಲಂಗಾಣದಲ್ಲಿಯೂ ಹಲವು ಭರವಸೆಗಳನ್ನು ನೀಡಿದೆ. ಆದರೆ ಕರ್ನಾಟಕದ ಕಾಂಗ್ರೆಸ್‌ ಗ್ಯಾರಂಟಿಗಳ ಬಗ್ಗೆ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್‌ ರಾವ್‌ ಅವರ ಪಕ್ಷದ ಅಭ್ಯರ್ಥಿಯೊಬ್ಬರು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಿ ತೆಲಂಗಾಣದಲ್ಲಿ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್‌ ಈಶ್ವರ್‌ ಪ್ರತಿಭಟನೆ ನಡೆಸಿದ್ದಾರೆ.

ತೆಲಂಗಾಣದಲ್ಲಿ ಕಾಂಗ್ರೆಸ್‌ ಪರವಾಗಿ ಶಾಸಕ ಪ್ರದೀಪ್‌ ಈಶ್ವರ್‌ ಚುನಾವಣಾ ಪ್ರಚಾರದಲ್ಲಿದ್ದರು. ಇದರ ನಡುವೆಯೇ ತೆಲಂಗಾಣ ಸಚಿವ ಪ್ರತಾಪ್ ರೆಡ್ಡಿ ಸ್ವಗ್ರಾಮದ ವೆಲುಪುರದಲ್ಲಿ ಅಂಬೇಡ್ಕರ್‌ ಪ್ರತಿಮೆ ಎದುರು ಕಾಂಗ್ರೆಸ್‌ ಕಾರ್ಯಕರ್ತರೊಂದಿಗೆ ಪ್ರದೀಪ್‌ ಈಶ್ವರ್‌ ಪ್ರತಿಭಟನೆ ನಡೆಸುತ್ತಿದ್ದಾರೆ.

ಶಾಸಕ ಪ್ರದೀಪ್‌ ಈಶ್ವರ್‌, ಬಾಲಕೊಂಡ ಕ್ಷೇತ್ರದಲ್ಲಿ ಚುನಾವಣಾ ಉಸ್ತುವಾರಿಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಮುತ್ಯಾಲ ಸುನೀಲ್ ಕುಮಾರ್ ಪರ ಪ್ರಚಾರ ನಡೆಸುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು