News Karnataka Kannada
Saturday, April 27 2024
ಚಿಕ್ಕಬಳ್ಳಾಪುರ

ನಕಲಿ ಬೆತ್ತಲೆ ವಿಡಿಯೋ ತೋರಿಸಿ ಶಿಕ್ಷಕನಿಂದ 9 ಲಕ್ಷಕ್ಕೂ ಹೆಚ್ಚು ಹಣ ವಂಚನೆ

ದಿನ ಕಳೆದಂತೆ ಆನ್ಲೈನ್ ನಲ್ಲಿ ಹಣ ಕಳೆದುಕೊಳ್ಳುವವರ ಸಂಖ್ಯೆ ಹೆಚ್ಚಾಗುತ್ತಿದೆ ಇಂತಹದ್ದೇ ಪ್ರಕರಣವೊಂದು ಬೆಳಕಿಗೆ ಬಂದಿದೆ.
Photo Credit : NewsKarnataka

ಚಿಕ್ಕಬಳ್ಳಾಪುರ: ದಿನ ಕಳೆದಂತೆ ಆನ್ಲೈನ್ ನಲ್ಲಿ ಹಣ ಕಳೆದುಕೊಳ್ಳುವವರ ಸಂಖ್ಯೆ ಹೆಚ್ಚಾಗುತ್ತಿದೆ ಇಂತಹದ್ದೇ ಪ್ರಕರಣವೊಂದು ಬೆಳಕಿಗೆ ಬಂದಿದೆ.

ಚರ್ಮರೋಗ ಕಾಯಿಲೆ ವಾಸಿಗೆಂದು ಫೇಸ್​​ಬುಕ್​​ನಲ್ಲಿ ಸಿಕ್ಕ ಲಿಂಕ್‍ನ್ನು ಬಳಸಿ ಅರೆಬೆತ್ತಲಾದ ಶಿಕ್ಷಕನ ವಿಡಿಯೋವನ್ನೇ ಸಂಪೂರ್ಣಬೆತ್ತಲೆ ವಿಡಿಯೋದಂತೆ ಸೃಷ್ಠಿಸಿ, ಆತನಿಂದ 9 ಲಕ್ಷದ 99 ಸಾವಿರ ರೂ. ಹಣವನ್ನು ಪಡೆದು ಬ್ಲಾಕ್‍ಮೇಲ್  ಮಾಡುತ್ತಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ.

ಜಿಲ್ಲೆಯ ಗೌರಿಬಿದನೂರು ನಗರವಾಸಿ ಹಾಗೂ ಚಿಕ್ಕಬಳ್ಳಾಪುರದಲ್ಲಿ ಶಿಕ್ಷಕನಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸಿ.ಜಗದೀಶ್ ಎನ್ನುವವರು ವಂಚನೆಗೊಳಗಾದವರು.

ಅಸಲಿಗೆ ಜಗದೀಶ್‍ಗೆ ಸೋರಿಯಾಸಿಸ್ ಎನ್ನುವ ಚರ್ಮರೋಗ ಕಾಯಿಲೆ ಇದೆ. ಸೋರಿಯಾಸಿಸ್ ಕಾಯಿಲೆಗೆ ಚಿಕಿತ್ಸೆ ನೀಡುವುದಾಗಿ ಫೇಸ್​​ಬುಕ್​​​ನಲ್ಲಿ ಲಿಂಕ್​ ಒಂದು ಹರಿದಾಡುತ್ತಿತ್ತು. ಲಿಂಕ್‍ನವರು ಹೇಳಿದ ಹಾಗೆ ಅರೆಬೆತ್ತಲಾಗಿ ಜಗದೀಶ ವಿಡಿಯೋ ಕಳಿಸಿದ್ದಾನೆ. ಅದೇ ವಿಡಿಯೋವನ್ನು ಬಳಸಿಕೊಂಡು ಶಿಕ್ಷಕನ ನಕಲಿ ಬೆತ್ತಲೆ ವಿಡಿಯೋ ಸೃಷ್ಠಿಸಿದ್ದಾರೆ. ಅದನ್ನೇ ಮುಂದಿಟ್ಟುಕೊಂಡ ಸೈಬರ್ ವಂಚಕರು ಶಿಕ್ಷಕ ಜಗದೀಶ್‍ನಿಂದ ವಿವಿಧ ದಿನಾಂಕಗಳಲ್ಲಿ ವಿವಿಧ ಅಕೌಂಟ್‍ಗಳಿಗೆ ರೂ. 9,99000 ಹಣವನ್ನು ಹಾಕಿಸಿಕೊಂಡಿದ್ದಾರೆ.

ಕೊನೆಗೆ ತಾನು ಮೋಸ ಹೋಗಿರುವುದನ್ನು ಅರಿತುಕೊಂಡ ಶಿಕ್ಷಕ ಜಗದೀಶ್ ನ್ಯಾಯ ಕೊಡಿಸುವಂತೆ ಚಿಕ್ಕಬಳ್ಳಾಪುರ ಸೈಬರ್ ಠಾಣೆಯ ಮೆಟ್ಟಿಲೇರಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು