ಚಿಕ್ಕಬಳ್ಳಾಪುರ: ದಿನ ಕಳೆದಂತೆ ಆನ್ಲೈನ್ ನಲ್ಲಿ ಹಣ ಕಳೆದುಕೊಳ್ಳುವವರ ಸಂಖ್ಯೆ ಹೆಚ್ಚಾಗುತ್ತಿದೆ ಇಂತಹದ್ದೇ ಪ್ರಕರಣವೊಂದು ಬೆಳಕಿಗೆ ಬಂದಿದೆ.
ಚರ್ಮರೋಗ ಕಾಯಿಲೆ ವಾಸಿಗೆಂದು ಫೇಸ್ಬುಕ್ನಲ್ಲಿ ಸಿಕ್ಕ ಲಿಂಕ್ನ್ನು ಬಳಸಿ ಅರೆಬೆತ್ತಲಾದ ಶಿಕ್ಷಕನ ವಿಡಿಯೋವನ್ನೇ ಸಂಪೂರ್ಣಬೆತ್ತಲೆ ವಿಡಿಯೋದಂತೆ ಸೃಷ್ಠಿಸಿ, ಆತನಿಂದ 9 ಲಕ್ಷದ 99 ಸಾವಿರ ರೂ. ಹಣವನ್ನು ಪಡೆದು ಬ್ಲಾಕ್ಮೇಲ್ ಮಾಡುತ್ತಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ.
ಜಿಲ್ಲೆಯ ಗೌರಿಬಿದನೂರು ನಗರವಾಸಿ ಹಾಗೂ ಚಿಕ್ಕಬಳ್ಳಾಪುರದಲ್ಲಿ ಶಿಕ್ಷಕನಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸಿ.ಜಗದೀಶ್ ಎನ್ನುವವರು ವಂಚನೆಗೊಳಗಾದವರು.
ಅಸಲಿಗೆ ಜಗದೀಶ್ಗೆ ಸೋರಿಯಾಸಿಸ್ ಎನ್ನುವ ಚರ್ಮರೋಗ ಕಾಯಿಲೆ ಇದೆ. ಸೋರಿಯಾಸಿಸ್ ಕಾಯಿಲೆಗೆ ಚಿಕಿತ್ಸೆ ನೀಡುವುದಾಗಿ ಫೇಸ್ಬುಕ್ನಲ್ಲಿ ಲಿಂಕ್ ಒಂದು ಹರಿದಾಡುತ್ತಿತ್ತು. ಲಿಂಕ್ನವರು ಹೇಳಿದ ಹಾಗೆ ಅರೆಬೆತ್ತಲಾಗಿ ಜಗದೀಶ ವಿಡಿಯೋ ಕಳಿಸಿದ್ದಾನೆ. ಅದೇ ವಿಡಿಯೋವನ್ನು ಬಳಸಿಕೊಂಡು ಶಿಕ್ಷಕನ ನಕಲಿ ಬೆತ್ತಲೆ ವಿಡಿಯೋ ಸೃಷ್ಠಿಸಿದ್ದಾರೆ. ಅದನ್ನೇ ಮುಂದಿಟ್ಟುಕೊಂಡ ಸೈಬರ್ ವಂಚಕರು ಶಿಕ್ಷಕ ಜಗದೀಶ್ನಿಂದ ವಿವಿಧ ದಿನಾಂಕಗಳಲ್ಲಿ ವಿವಿಧ ಅಕೌಂಟ್ಗಳಿಗೆ ರೂ. 9,99000 ಹಣವನ್ನು ಹಾಕಿಸಿಕೊಂಡಿದ್ದಾರೆ.
ಕೊನೆಗೆ ತಾನು ಮೋಸ ಹೋಗಿರುವುದನ್ನು ಅರಿತುಕೊಂಡ ಶಿಕ್ಷಕ ಜಗದೀಶ್ ನ್ಯಾಯ ಕೊಡಿಸುವಂತೆ ಚಿಕ್ಕಬಳ್ಳಾಪುರ ಸೈಬರ್ ಠಾಣೆಯ ಮೆಟ್ಟಿಲೇರಿದ್ದಾರೆ.
ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.
ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…
ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ ಬಂದಿದ್ದು, ನಂಜನಗೂಡಿನ ಸರ್ಕಾರಿ ಆದರ್ಶ ಶಾಲೆಯ ವಿದ್ಯಾರ್ಥಿನಿ ಬಾಂಧವ್ಯ ತಾಲ್ಲೂಕಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ…
ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ಶೇ 65.45ರಷ್ಟು ಮತದಾನ ದಾಖಲಾಗಿದ್ದು, ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಭಾಲ್ಕಿಯಲ್ಲಿ ಅತಿ ಹೆಚ್ಚು…
ಮೇ 14 ರಿಂದ 23 ರವರೆಗೆ ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ಹಾಗೂ ನರಗುಂದ ಶಾಖಾ ಕಾಲುವೆ ಮೂಲಕ ನವಲಗುಂದ ಅಣ್ಣಿಗೇರಿ,…
ಎಸ್ಸಿ, ಎಸ್ಟಿ ಅನುದಾನ ಮುಸ್ಲಿಂ ಪಾಲಾಗುತ್ತಿದೆ ಎಂದು ಬಿಜೆಪಿ ತನ್ನ ಎಕ್ಸ್ ಖಾತೆಯನ್ನು ವಿಡಿಯೋ ಜಾಹೀರಾತು ಪ್ರಕಟಿಸಿತ್ತು. ಈ ವಿಡಿಯೋ…