ಚಿಕ್ಕಬಳ್ಳಾಪುರ: ರಾತ್ರಿ ಹೊತ್ತು ಹೊಟೇಲ್ನಲ್ಲಿ ಮಲಗಿದ್ದವನ ಚಾಕುವಿನಿಂದ ಕುತ್ತಿಗೆ ಸೀಳಿ ಬರ್ಬರ ಹತ್ಯೆ ಮಾಡಿ ದುಷ್ಕರ್ಮಿಗಳು ಸ್ಥಳದಿಂದ ಕಾಲ್ಕಿತ್ತಿದ್ದಾರೆ.ಈ ಘಟನೆ ನೆ ಬಾಗೇಪಲ್ಲಿ ಪಟ್ಟಣ ಹೊರವಲಯದ ಟಿಬಿ ಕ್ರಾಸ್ನಲ್ಲಿ ನಡೆದಿದೆ.
ಟಿಬಿ ಕ್ರಾಸ್ನ ಚೌಡೇಶ್ವರಿ ಹೋಟೆಲ್ನ ಮುಂದೆ ಅಡುಗೆ ಮಾಡುವ ಜಾಗದಲ್ಲಿ ಆಂಧ್ರಪ್ರದೇಶದ ದೇಮಕೇತೇಪಲ್ಲಿಯ 58 ವರ್ಷದ ವೆಂಕಟೇಶಪ್ಪ ಎಂಬಾತ ರಾತ್ರಿ ಮಲಗಿದ್ದಾನೆ.ಆದ್ರೆ ಬೆಳಿಗ್ಗೆಯಾಗುವಷ್ಟರಲ್ಲಿ ಆತ ಬರ್ಬರವಾಗಿ ಹತ್ಯೆಯಾಗಿದ್ದು ಅಪರಿಚಿತರು ಕೃತ್ಯ ಎಸಗಿ ಸ್ಥಳದಿಂದ ಪರಾರಿಯಾಗಿದ್ದಾರೆ.
ಇನ್ನು ಈ ಘಟನೆ ಸಂಬಂಧ ಚಿಕ್ಕಬಳ್ಳಾಪುರ ಎಸ್ಪಿ ಡಿ.ಎಲ್ ನಾಗೇಶ್, ಎಎಸ್ಪಿ ಖಾಸಿಂ, ಡಿವೈಎಸ್ಪಿ, ಶಿವಕುಮಾರ್ ಸೇರಿದಂತೆ ಬಾಗೇಪಲ್ಲಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ಬೆರಳಚ್ಚು ಶೋಧ ನಡೆಸಿ ಪರಿಶೀಲಿಸಿದ್ದಾರೆ.ನಂತರ ಮೃತದೇಹವನ್ನ ಬಾಗೇಪಲ್ಲಿ ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ.ಘಟನೆ ಸಂಬಂಧ ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಕೊಲೆಪಾತಕರ ಶೋಧನೆ ನಡೆಸಿದ್ದಾರೆ.
ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್…
ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…
ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…
ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.
ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…
ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…