News Karnataka Kannada
Sunday, April 28 2024
ಚಿತ್ರದುರ್ಗ

ಚಿತ್ರದುರ್ಗಕ್ಕೆ ಮದಕರಿ ನಾಯಕರ ಕೊಡುಗೆ ಅಪಾರ: ಮಾಜಿ ಸಚಿವ ಎಚ್.ಆಂಜನೇಯ

Ananeya
Photo Credit :

ಚಿತ್ರದುರ್ಗ: ಭರಮಸಾಗರ ಒಂದು ಸಾವಿರ ಎಕರೆ ವಿಸ್ತೀರ್ಣದ ದೊಡ್ಡಕೆರೆಯ ನಿರ್ಮಾತೃ ಬಿಚ್ಚುಗತ್ತಿ ಭರಮಣ್ಣ ನಾಯಕ ಹಾಗೂ ಒಣಗಿದ್ದ ಕೆರೆಗೆ ನೀರು ಹರಿಸಿದ ಭಗೀರಥರಾದ ಡಾ.ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರನ್ನು ನಾವು ಸದಾ ಸ್ಮರಿಸಬೇಕು ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಚಿತ್ರದುರ್ಗ ಜಿಲ್ಲೆ ಮಳೆಯಾಶ್ರೀತ ಪ್ರದೇಶವಾಗಿದ್ದು, ಬರಗಾಲವನ್ನು ಒದ್ದು ಮಲಗಿದೆ. ಇಲ್ಲಿನ ನೀರಿನ ಸಮಸ್ಯೆ ಅರಿತು 17ನೇ ಶತಮಾನದಲ್ಲಿಯೇ ನೀರಿನ ಸಂಗ್ರಹಕ್ಕೆ ನೂರಾರು ಕೆರೆ, ಕಟ್ಟೆ, ಕೊಳ್ಳ, ಹೊಂಡ ನಿರ್ಮಿಸಿದ ಖ್ಯಾತಿ ದುರ್ಗವನ್ನು ಆಳಿದ ಮದಕರಿ ನಾಯಕರಿಗೆ ಸಲ್ಲುತ್ತದೆ. ಅದರಲ್ಲೂ ಬಿಚ್ಚುಗತ್ತಿ ಭರಮಣ್ಣ ನಾಯಕ ಅನೇಕ ಕೆರೆ, ಹೊಂಡಗಳನ್ನು ನಿರ್ಮಿಸುವ ಮೂಲಕ ಬಯಲುಸೀಮೆ ಜನರ ಬಾಯಾರಿಕೆ ತಣಿಸುವ ಕಾರ್ಯ ಮಾಡಿರುವುದು ಸದಾ ಸ್ಮರಣೀಯ. ಈ ಹಿನ್ನೆಲೆಯಲ್ಲಿ ಇಬ್ಬರು ಮಹಾನ್ ಸಾಧಕರ ಕಂಚಿನ ಪ್ರತಿಮೆಗಳನ್ನು ಕೆರೆದಂಡೆ ಮೇಲೆ ನಿರ್ಮಿಸಬೇಕೆಂದು ಒತ್ತಾಯಿಸಿದ್ದಾರೆ.

ವಿಶೇಷವಾಗಿ ಸಂತೇಹೊಂಡ ಸೇರಿದಂತೆ ಚಿತ್ರದುರ್ಗ ನಗರ ಕೇಂದ್ರದಲ್ಲಿ ದೊಡ್ಡ ಹೊಂಡಗಳನ್ನು ನಿರ್ಮಿಸಿದ್ದಾರೆ. ಇದರಿಂದ ಅಂತರ್ಜಲ ವೃದ್ಧಿ ಜತೆಗೆ ಕುಡಿಯುವ ನೀರಿನ ಸಮಸ್ಯೆ ನೀಗಿಸುವ ಕೆಲಸವನ್ನು ಮಾಡಿದ್ದಾರೆ. ಅದರಲ್ಲೂ ಭರಮಸಾಗರದಲ್ಲಿ ಬೃಹತ್ ಕೆರೆ ನಿರ್ಮಿಸಿ ಸಾವಿರಾರು ರೈತರ ಬದುಕಿಗೆ ಆಸರೆ ಒದಗಿಸಿದ್ದರು. ಆದರೆ, ಕಾಲಕ್ರಮೇಣ ಮಳೆ ಕಡಿಮೆಯಾಗಿ, ವಿವಿಧೆಡೆಚೆಕ್‌ಡ್ಯಾಂ ನಿರ್ಮಾಣಗಳಿಂದ ಕೆರೆ ಬರಿದಾಗಿ ಭರಮಸಾಗರ ಸುತ್ತಮುತ್ತಲಿನ ಕೃಷಿಕರ ಬದುಕು ಸಂಕಷ್ಟಕ್ಕೆ ಸಿಲುಕಿತ್ತು ಎಂದಿದ್ದಾರೆ.

ಸದಾ ಜನರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಮನ ಮಿಡಿಯುವ ಸಿರಿಗೆರೆ ತರಳಬಾಳು ಜಗದ್ಗುರುಗಳು ಈ ಪ್ರದೇಶದಲ್ಲಿನ ನೀರಿನ ಸಮಸ್ಯೆ ಬಗೆಹರಿಸಲು ಚಿಂತನೆ ನಡೆಸಿ, ಸರ್ಕಾರದ ಮೇಲೆ ನಿರಂತರ ಒತ್ತಡ ತಂದು ತುಂಗಾಭದ್ರ ನದಿಯಿಂದ ಏತ ನೀರಾವರಿ ಮೂಲಕ ಕೆರೆ ತುಂಬಿಸುವ ಮಹತ್ತರ ಕಾರ್ಯಕ್ಕೆ ಮುಂದಾದರು ಎಂದು ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಯೋಜನೆಗೆ ಅನುದಾನ ಬಿಡುಗಡೆ ಮಾಡಿದರು. ಬಳಿಕ ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ, ಬಿ.ಎಸ್.ಯಡಿಯೂರಪ್ಪ ಸೇರಿದಂತೆ ವಿವಿಧ ರಾಜಕಾರಣಿಗಳು ಶ್ರೀಗಳ ಆಶಯಕ್ಕೆ ಬೆನ್ನೆಲುಬಾಗಿ ನಿಂತು, ತುರ್ತಾಗಿ ಯೋಜನೆಗೆ ಚಾಲನೆ ನೀಡಿ, ಒಂದೂವರೆ ವರ್ಷದಲ್ಲಿಯೇ ಕಾಮಗಾರಿ ಮುಕ್ತಾಯಗೊಂಡಿದ್ದು ಗಮನಾರ್ಹ.

ಈಗ ಕೆರೆ ನಿರ್ಮಾತೃ, ದೂರದೃಷ್ಟಿ ನಾಯಕ ಬಿಚ್ಚುಗತ್ತಿ ಭರಮಣ್ಣ ನಾಯಕನ ಪ್ರತಿಮೆ ನಿರ್ಮಾಣ ಮಾಡಬೇಕೆಂದು ನನ್ನ ಹೆಬ್ಬಯಕೆ. ಈ ನಿಟ್ಟಿನಲ್ಲಿ ದೊಡ್ಡಕೆರೆ ದಂಡೆ ಮೇಲೆ ಸುಂದರ ಉದ್ಯಾನ ನಿರ್ಮಾಣ ಮಾಡಿ, ಅದರಲ್ಲಿ ಕೆರೆ ನಿರ್ಮಾತೃ ಬಿಚ್ಚುಗತ್ತಿ ಭರಮಣ್ಣ ನಾಯಕ ಹಾಗೂ ತರಳಬಾಳು ಶ್ರೀಗಳ ಕಂಚಿನ ಪ್ರತಿಮೆ ನಿರ್ಮಿಸಬೇಕು. ಈ ಮಹಾನ್ ಸಾಧಕರ ಕಂಚಿನ ಪ್ರತಿಮೆ ನಿರ್ಮಾಣ ಕಾರ್ಯದಲ್ಲಿ ನಾನು ಸಂಪೂರ್ಣ ಭಾಗಿಯಾಗುತ್ತೇನೆ ಎಂದು ಆಂಜನೇಯ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು