ಚಿತ್ರದುರ್ಗ: ಇಂದು ಮುಂಜಾನೆ ಹಿರಿಯೂರು ತಾಲೂಕಿನ ಕೆ ಆರ್ ಹಳ್ಳಿ ಗೇಟ್ ಬಳಿ ರಸ್ತೆಯ ಬದಿಯಲ್ಲಿ ನಿಂತಿದ್ದಂತ ಲಾರಿಗೆ ಟೆಂಪೋ ಟ್ರಾವೆಲರ್ ಡಿಕ್ಕಿಯಾದ ಪರಿಣಾಮ, ಸ್ಥಳದಲ್ಲಿಯೇ ನಾಲ್ವರು ಸಾವನ್ನಪ್ಪಿ, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿರೋ ಘಟನೆ ನಡೆದಿದೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೆ ಆರ್ ಹಳ್ಳಿ ಗೇಟ್ ನಲ್ಲಿ, ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಟ್ಟು ನಿಂತಿದ್ದಂತ ಲಾರಿಗೆ, ಹಿಂಬದಿಯಿಂದ ಟೆಂಪೋ ಟ್ರಾವೆಲರ್ ಡಿಕ್ಕಿಯಾಗಿದೆ. ಈ ಭೀಕರ ರಸ್ತೆ ಅಪಘಾತದಲ್ಲಿ, ಸ್ಥಳದಲ್ಲಿಯೇ ಇಬ್ಬರು ಸಾವನ್ನಪ್ಪಿದ್ದಾರೆ. ಅಲ್ಲದೇ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೃತರ ಬಗ್ಗೆ ಮಾಹಿತಿ ತಿಳಿದು ಬರಬೇಕಿದೆ. ಈ ಟೆಂಪೋ ಟ್ರಾವೆಲರ್ ಗೋಕರ್ಣದಿಂದ ಬೆಂಗಳೂರು ಕಡೆಗೆ ಸಾಗುತ್ತಿತ್ತು ಎನ್ನಲಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿರುವಂತ ಹಿರಿಯೂರು ಗ್ರಾಮಾಂತರ ಠಾಣೆಯಲ್ಲಿ ಪೊಲೀಸರು, ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.