News Karnataka Kannada
Friday, May 03 2024
ಚಿತ್ರದುರ್ಗ

 ಚಿತ್ರದುರ್ಗ : ಸಿಡಿಲು ಬಡಿದು ಕುರಿಗಾಹಿ ಸಾವು

Untitled 101
Photo Credit :

ಚಿತ್ರದುರ್ಗ : ಸಿಡಿಲು ಬಡಿದು ಕುರಿಗಾಹಿಯೊಬ್ಬ ಸ್ಥಳದಲ್ಲೆ ಮೃತಪಟ್ಟ ಘಟನೆ ಜಿಲ್ಲೆಯ ಚಳ್ಳಕೆರೆ ತಾಲ್ಲೂಕು ತಳಕು ಹೋಬಳಿಯ ದೇವರೆಡ್ಡಿಹಳ್ಳಿ ಗ್ರಾಮದಲ್ಲಿ ಭಾನುವಾರ ಸಂಜೆ ನಡೆದಿದೆ.

ಮೃತ ಯುವಕ ಯಶವಂತ(19). ಭಾನುವಾರ ಸಂಜೆ 4:00 ಗಂಟೆಗೆ ಈ ಘಟನೆ ನಡೆದಿದ್ದು, ಕುರಿಕಾಯಲು ಹೋಗಿದ್ದ ಯುವಕ ಕುರಿಗಳನ್ನು ಮರಳಿ‌ ಮನೆಕಡೆಗೆ ವಾಪಸ್ ಬರುವಾಗ ದೇವರೆಡ್ಡಿ ಹಳ್ಳಿ ಗ್ರಾಮದ ಹೊರವಲಯದಲ್ಲಿ ಹುಣಸೆಮರದ ಕೆಳಗಡೆ ನಿಂತಿದ್ದಾನೆ.

ಇದೇವೇಳೆ ಸಿಡಿಲು ಬಡಿದು ಸ್ಥಳದಲ್ಲೆ ಮೃತಪಟ್ಟಿದ್ದಾನೆ. ವಿಷಯ ತಿಳಿದು ಚಳ್ಳಕೆರೆ ತಹಶೀಲ್ದಾರ್ ಎನ್.ರಘುಮೂರ್ತಿ, ತಳಕು ಪಿಎಸ್ ಐ. ಮಾರುತಿ ಸ್ಥಳಕ್ಕೆ ಭೇಟಿನೀಡಿ ಪರಿಶೀಲಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು