ದಾಳಿಂಬೆ ಹಾಗೂ ಇತರ ತೋಟಗಾರಿಕಾ ಬೆಳೆವಿಮೆ ಮಂಜೂರಾತಿಗೆ ತೀರ್ಮಾನ: ಸಿಎಂ

ಚಿತ್ರದುರ್ಗ: ದಾಳಿಂಬೆ ಸೇರಿದಂತೆ ಇತರ ತೋಟಗಾರಿಕೆ ಬೆಳೆಗಳ ಬೆಳೆವಿಮೆಗೆ ಶೀಘ್ರದಲ್ಲಿ ಮಂಜೂರಾತಿಯನ್ನು ನೀಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಹಿರಿಯೂರು ತಾಲ್ಲೂಕಿನ ಧರ್ಮಪುರ ಕೆರೆ ಮತ್ತು ಇತರೆ 7 ಕೆರೆಗಳಿಗೆ ವೇದಾವತಿ ನದಿಯಿಂದ ಏತ ನೀರಾವರಿ ಮೂಲಕ ನೀರನ್ನು ಕೆರೆಗಳಿಗೆ ತುಂಬಿಸುವ ಕಾಮಗಾರಿಗೆ ಶಂಕುಸ್ಥಾಪನೆ ಮತ್ತು ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯವನ್ನು ನೆರವೇರಿಸಿ ಮಾತನಾಡಿದರು.

ಚಿತ್ರದುರ್ಗ 171 ಹಳ್ಳಿಗಳಿಗೆ, ಹಿರಿಯೂರಿನ 131 ಹಳ್ಳಿಗಳಿಗೆ ಬಹುಗ್ರಾಮ ಕುಡಿಯು ನೀರಿನ ಯೋಜನೆಗೆ ಅನುಮೋದನೆ ನೀಡಲಾಗಿದ್ದು, ಟೆಂಡರ್ ಪ್ರಕ್ರಿಯೆಯೂ ಮುಗಿದಿರುತ್ತದೆ. ಧರ್ಮಪುರ ಕೆರೆ ಸೇರಿದಂತೆ 7 ಕೆರೆಗಳಿಗೆ ನೀರು ತುಂಬುವ ಕಾಮಗಾರಿಯನ್ನು 40 ಕೋಟಿ ರೂ.ಗಳಲ್ಲಿ ಹಮ್ಮಿಕೊಳ್ಳಲಾಗಿದ್ದು, ಇನ್ನಿತರ ಪೂರಕ ಕೆಲಸಗಳಿಗೆ 50 ಕೋಟಿ ರೂ.ಗಳನ್ನು ಮೀಸಲಿರಿಸಿದ್ದು, ಇದಕ್ಕೆ ಸಂಬಂಧಿಸಿದ ಟೆಂಡರ್ ಪ್ರಕ್ರಿಯೆಯನ್ನು ಒಂದು ತಿಂಗಳೊಳಗಾಗಿ ಪೂರ್ಣಗೊಳಿಸಲಾಗುವುದು. ಈ ಭಾಗದ ಜನರ ಆರೋಗ್ಯ ಸೌಕರ್ಯಕ್ಕಾಗಿ ಸರ್ಕಾರಿ ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ. ತುಮಕೂರು-ಚಿತ್ರದುರ್ಗ-ದಾವಣಗೆರೆ ರೈಲ್ವೆ ಯೋಜನೆ ಕಾಮಗಾರಿಯನ್ನು ಶೀಘ್ರದಲ್ಲಿ ಪ್ರಾರಂಭಿಸಲಾಗುವುದು. 1000 ಎಕರೆಯ ಕೈಗಾರಿಕಾ ಟೌನ್‍ಶಿಪ್ ನಿರ್ಮಾಣಕ್ಕೆ ಸರ್ಕಾರಿ ಆದೇಶವನ್ನು ನೀಡಲಾಗಿದೆ. ಟೌನ್‌ಶಿಪ್‌ಗಾಗಿ ಈಗಾಗಲೇ ಸ್ಥಳ ನಿಗದಿಪಡಿಸಲಾಗಿದೆ. ಬೆಳಗಾವಿ, ದಾವಣಗೆರೆ, ಚಿತ್ರದುರ್ಗ ಮತ್ತು ಧಾರವಾಡದಲ್ಲಿ ಕೈಗಾರಿಕಾ ಟೌನ್‍ಶಿಪ್ ನಿರ್ಮಾಣ ಮಾಡುವ ಉದ್ದೇಶವಿದೆ ಎಂದರು.

ಭದ್ರಾ ಮೇಲ್ದಂಡೆ ಯೋಜನೆ, ಎತ್ತಿನಹೊಳೆ ಯೋಜನೆ ಗಳು ಈ ಭಾಗದ ರೈತರ ಕನಸನ್ನು ನನಸು ಮಾಡುವ ದಿಕ್ಕನಲ್ಲಿ ಪ್ರಾರಂಭವಾಗಿದೆ. 2008 ರಲ್ಲಿ ನಾಯಕರಾದ ಯಡಿಯೂರಪ್ಪನವರ ಈ ಭಾಗದ ನೀರಿನ ಬವಣೆಯನ್ನು ತೀರಿಸಲು ತೀರ್ಮಾನಿಸಿ, ನಾನು ನೀರಾವರಿ ಸಚಿವನಾಗಿದ್ದಾಗ, ಈ ಬೃಹತ್ ಯೋಜನೆಗೆ ಅನುಮತಿ, ಪರಿಸರ ಅನುಮತಿ, ಅರಣ್ಯದ ಅನುಮತಿಯನ್ನು ಪಡೆದು ಯೋಜನೆ ಪ್ರಾರಂಭಿಸಲಾಯಿತು ಎಂದರು.

ಶಿಕ್ಷಣ ಕ್ಷೇತ್ರಕ್ಕೆ ಸರ್ಕಾರ ಒತ್ತು ನೀಡುತ್ತಿದೆ. ಒಂದೇ ವರ್ಷದಲ್ಲಿ 7000 ಕೊಠಡಿಗಳನ್ನು ನಿರ್ಮಿಸುವ ತೀರ್ಮಾನಿಸಲಾಗಿದೆ. 100 ಪ್ರಾಥಮಿಕ ಆರೋಗ್ಯಕೇಂದ್ರಗಳನ್ನು ಮೇಲ್ದರ್ಜೆಗೇರಿಸುವುದು. ಪ್ರತಿ ತಾಲ್ಲೂಕಿನಲ್ಲಿಯೂ ಕಡುಬಡವರಿಗೆ, ಹಿರಿಯರಿಗೆ ಉಚಿತ ಆರೋಗ್ಯ ತಪಾಸಣೆ ವ್ಯವಸ್ಥೆ, ಕಣ್ಣಿನ ತಪಾಸಣೆ ನಡೆಸಿ ಚಿಕಿತ್ಸೆ ನೀಡುವ ವ್ಯವಸ್ಥೆ ಮಾಡಲಾಗುತ್ತಿದೆ. ಶ್ರವಣ ದೋಷವಿರುವ ಕಡುಬಡವರಿಗೆ ಶ್ರವಣ ಸಮಸ್ಯೆ ನಿವಾರಣೆಗೆ ಧ್ವನಿ ಪೆಟ್ಟಿಗೆಯನ್ನು ವಿತರಿಸುವ ಯೋಜನೆಗೆ 500 ಕೋಟಿ ರೂ.ಗಳನ್ನು ಮೀಸಲಿರಿಸಿದೆ. ಡಯಾಲಿಸಿಸ್‍ನ್ನು 30 ಸಾವಿರ ಸೈಕಲ್‍ನಿಂದ 60 ಸಾವಿರ ಸೈಕಲ್‍ಗೆ ಏರಿಸಲಾಗಿದೆ. ಕ್ಯಾನ್ಸರ್ ಚಿಕಿತ್ಸೆಗೆ 10 ಕೇಂದ್ರಗಳಲ್ಲಿ ಕಿಮೋಥೆರಪಿ ನೀಡಲಾಗುತ್ತಿದೆ. ಹೀಗೆ, ಶಿಕ್ಷಣ, ಉದ್ಯೋಗ ಪ್ರಾಶಸ್ತ್ಯ ನೀಡಿ ಎಸ್ ಸಿ ಎಸ್‍ಟಿ, ಹಿಂದುಳಿದ ವರ್ಗಗಳ ಅಭ್ಯುದಯ, ಸ್ತ್ರೀಶಕ್ತಿ ಸಂಘಗಳಿಗೆ 1.5 ಲಕ್ಷ ಸಾಲಸೌಲಭ್ಯ ನೀಡಿ, ಅವರು ಉತ್ಪಾದಿಸುವ ಉತ್ಪನ್ನಗಳಿಗೆ ಮಾರುಕಟ್ಟೆ ಸೌಲಭ್ಯವನ್ನು ಒದಗಿಸಲಾಗುವುದು. ದುಡಿಯುವ ವರ್ಗಕ್ಕೆ ಶಕ್ತಿ ತುಂಬುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ರೈತರ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹಿಸಲು ರೈತವಿದ್ಯಾನಿಧಿ ಯೋಜನೆ ಜಾರಿ ಮಾಡಿದ್ದು, 8 ಲಕ್ಷ ವಿದ್ಯಾರ್ಥಿಗಳಿಗೆ ಯೋಜನೆಯನ್ನು ತಲುಪಿಸಲಾಗಿದೆ. ಎಸ್ ಸಿ ಎಸ್ ಟಿ ಜನಾಂಗದ ಬಿಪಿಎಲ್ ಕುಟುಂಬಗಳಿಗೆ 75 ಯೂನಿಟ್ ಉಚಿತ ವಿದ್ಯುತ್ ಯೋಜನೆಯನ್ನು ಜಾರಿ ಮಾಡಲಾಗಿದೆ ಎಂದರು.

Gayathri SG

Recent Posts

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

3 hours ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

3 hours ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

3 hours ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

4 hours ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

5 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

5 hours ago