ಹಿರಿಯೂರು : ಇಲ್ಲಿನ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಬಗ್ಗನಡು ಗೇಟ್ ಬಳಿ ಸೋಮವಾರ ಮುಂಜಾನೆ ಟೆಂಪೊ ಟ್ರಾವೆಲರ್ ವಾಹನವು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದು ಇಬ್ಬರು ಮೃತಪಟ್ಟಿದ್ದು, ಒಂಬತ್ತು ಮಂದಿ ಗಾಯಗೊಂಡಿದ್ದಾರೆ. ಇಬ್ಬರಿಗೆ ಯಾವುದೇ ತೊಂದರೆಯಾಗಿಲ್ಲ.ಬೆಂಗಳೂರಿನ ಯುವತಿ ಶ್ವೇತಾ (24), ಟೆಂಪೊ ಟ್ರಾವೆಲರ್ ಕ್ಲೀನರ್ ಅರಿಕ್ಯದಾಸ್ (19) ಮೃತಪಟ್ಟವರು.
ಬೆಂಗಳೂರಿನ ಇಂಡಿಯನ್ ಅಕಾಡೆಮಿ ಕಾಲೇಜಿನಲ್ಲಿ ಬಿಸಿಎ ಪದವಿ ವ್ಯಾಸಂಗ ಮಾಡಿದ್ದ 2013ರ ಬ್ಯಾಚ್ನ ಒಟ್ಟು 11 ಮಂದಿ ಸ್ನೇಹಕೂಟ (ಗೆಟ್ ಟುಗೆದರ್) ಮಾಡಲು ಮಾರ್ಚ್ 10ರಂದು ಉಡುಪಿ, ಗೋಕರ್ಣಕ್ಕೆ ತೆರಳಿದ್ದರು. ಬೆಂಗಳೂರಿಗೆ ವಾಪಸ್ ಆಗುವಾಗ ಈ ಘಟನೆ ನಡೆದಿದೆ. ಕ್ಲೀನರ್ ಅರಿಕ್ಯದಾಸ್ ಸ್ಥಳದಲ್ಲೇ ಮೃತಪಟ್ಟರೆ, ಶ್ವೇತಾ ಅವರು ಚಿತ್ರದುರ್ಗದ ಜಿಲ್ಲಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸಂತೋಷ್ ಕುಮಾರ್, ದೀಪನ್ ಕಾರ್ತಿಕ್, ಪೂರ್ಣಿಮಾ ಜೆಸ್ಸಿ, ಕಾರ್ತಿಕ್, ಸಂತೋಷ್, ಸೈಯದ್ ಸುಹೇಬ್, ಅರುಳಮಾರಿಯಾ, ಶರತ್ ಕುಮಾರ್ ಹಾಗೂ ವಾಹನದ ಚಾಲಕ ಪ್ರದೀಪ್ ರಾಜ್ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪ್ರಕರಣ ದಾಖಲು ಮಾಡಿಕೊಂಡಿರುವ ಗ್ರಾಮಾಂತರ ಠಾಣೆ ಪೊಲೀಸರು ತಿಳಿಸಿದ್ದಾರೆ.
ಸ್ನೇಹಕೂಟಕ್ಕೆ ತೆರಳಿದ್ದ ಒಟ್ಟು 11 ಮಂದಿ ಪ್ರಸ್ತುತ ಬೆಂಗಳೂರಿನ ವಿವಿಧ ಕಂಪನಿಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ ಎನ್ನಲಾಗಿದೆ.
1890-1947ರ ಅವಧಿಯ ಭಿತ್ತಿಪತ್ರ, ಬಟ್ಟೆ ಲೇಬಲ್, ಬೆಂಕಿ ಪೊಟ್ಟಣದ ಮೇಲಿನ ಲೇಬಲ್ಗಳ ಕಲ್ಲಚ್ಚು ಕಲಾ ಪ್ರದರ್ಶನವನ್ನು ಕುಂಜಿಬೆಟ್ಟುವಿನ ಅದಿತಿ ಕಲಾ…
ಫುಟ್ಬಾಲ್ ಲೆಜೆಂಡ್ ಆಟಗಾರ ಸುನಿಲ್ ಛೆಟ್ರಿ ಅಂತಾರಾಷ್ಟ್ರೀಯ ಫುಟ್ಬಾಲ್ನಿಂದ ನಿವೃತ್ತಿ ಘೋಷಿಸಿದ್ದಾರೆ. ಜೂನ್ 6 ರಂದು ಕೊಲ್ಕತ್ತಾದ ಸಾಲ್ಟ್ ಲೇಕ್…
ನೋಕಿಯಾ ತನ್ನ 3210 ಫೋನನ್ನು ಮತ್ತೆ ಮರು ಪರಿಚಯಿಸಿದೆ. 90ರ ದಶಕದಲ್ಲಿ ಐಕಾನಿಕ್ ಫೋನ್ ಆಗಿ ಮಾರುಕಟ್ಟೆಗೆ ಬಂದ ನೋಕಿಯಾ…
ಗಾಳಿ - ಮಳೆಗೆ ಮರ ಬಿದ್ದು ವೃದ್ಧೆಯೋರ್ವರು ಮೃತಪಟ್ಟ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ಮೇ 16…
ಜೆಟ್ ಏರ್ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಅವರ ಪತ್ನಿ ಅನಿತಾ ಗೋಯಲ್ ಇಂದು ಬೆಳಗ್ಗೆ ಮುಂಬೈನ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.
ಪತ್ನಿಗೆ ವಿಡಿಯೋ ಕಾಲ್ ಮಾಡುತ್ತಲೇ ಜಿಮ್ ಟ್ರೈನರ್ ಆತ್ಮಹತ್ಯೆಗೆ ಶರಣಾದ ಘಟನೆ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಿಹಾರ…