News Karnataka Kannada
Sunday, April 28 2024
ಚಿತ್ರದುರ್ಗ

ನೀರಿಗಿಂತ, ಕುರ್ಚಿಗಾಗಿ ಪಾದಯಾತ್ರೆ ನಡೆಸುತ್ತಿದ್ದಾರೆ; ಸಚಿವ ಬಿ.ಶ್ರೀರಾಮುಲು

Sri Ramulu
Photo Credit :

ಚಿತ್ರದುರ್ಗ : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮೇಕೆದಾಟು ಪಾದಯಾತ್ರೆ ಮೂಲಕ ಒಂದೇ ಕಲ್ಲಿನಿಂದ ಮೂರು ಹಕ್ಕಿ ಹೊಡೆಯುವ ತಂತ್ರ ಮಾಡುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಹೇಳಿದರು.

ಚಿತ್ರದುರ್ಗದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಪಾದಯಾತ್ರೆ ಮೂಲಕ ಸಿದ್ದರಾಮಯ್ಯ, ಬಿಜೆಪಿ ಹಾಗೂ ಕುಮಾರಸ್ವಾಮಿ ಅವರನ್ನು ಹಣಿಯುವ ತಂತ್ರ ಮಾಡಿದ್ದಾರೆ ಎಂದರು. ಕಾಂಗ್ರೆಸ್ ನಾಯಕರು ಪಾದಯಾತ್ರೆಯಿಂದ ನೀರಿಗಿಂತ, ಕುರ್ಚಿಗಾಗಿ ನಡೆಸುತ್ತಿದ್ದಾರೆ. ಇದೊಂದು ರೀತಿಯಲ್ಲಿ ಅಸ್ತಿತ್ವ ಉಳಿಸಿಕೊಳ್ಳುವ ಪಾದಯಾತ್ರೆ ಎಂದು ಕುಟಕಿದರು.

ಕೋವಿಡ್ ಸಂದರ್ಭದಲ್ಲಿ ಸ್ವಾರ್ಥ ರಾಜಕೀಯ ಮಾಡುತ್ತಿದ್ದಾರೆ.ಅಮಾಯಕರ ಆರೋಗ್ಯದ ಜೊತೆ ಕಾಂಗ್ರೆಸ್ ಆಟವಾಡುತ್ತಿದೆ. ದಿನನಿತ್ಯ ಕೋವಿಡ್, ಒಮಿಕ್ರಾನ್ ಬಗ್ಗೆ ಮಾತಾಡುತ್ತಲೇ ನಿಯಮ ಉಲ್ಲಂಘನೆ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಾಂಗ್ರೆಸ್ ಅಧಿಕಾರದಲ್ಲಿ ಇದ್ದಾಗ ಏನೂ ಮಾಡದೇ, ಈಗ ಅಸ್ತಿತ್ವಕ್ಕೆ ಪಾದಯಾತ್ರೆ ನಡೆಸುತ್ತಿದೆ. ಕೊರೊನಾ ಕಾರಣಕ್ಕೆ ಪಾದಯಾತ್ರೆ ಬೇಡ ಎಂದು ವಿಪಕ್ಷ ನಾಯಕರಿಗೆ ಸ್ಪಷ್ಟವಾಗಿ ತಿಳಿಸಿದ್ದೇವೆ. ಆದರೂ ನಮ್ಮ ಮನವಿ ತಿರಸ್ಕಾರ ಮಾಡಿದ್ದಾರೆ. ಎಲ್ಲೆಲ್ಲೋ ಅಡ್ಡಾಡಿ ಬಂದವರು ಪಾದಯಾತ್ರೆ ಯಲ್ಲಿ ಭಾಗವಹಿಸುತ್ತಿದ್ದಾರೆ. ಇದರಿಂದಾಗಿ ಅಮಾಯಕರಿಗೆ ತೊಂದರೆಯಾಗುತ್ತಿದೆ.

ಹೈಕೋರ್ಟ್ ಗೆ ಅವರ ಭಂಡತನ ತಿಳಿಸುತ್ತೇವೆ. ಕುರ್ಚಿಗಾಗಿ ಸ್ವಾರ್ಥದಿಂದ ಪಾದಯಾತ್ರೆ ಮಾಡುವವರನ್ನು ಏನು ಮಾಡೋದು.
ತಮಿಳುನಾಡಿನಲ್ಲಿ ನಿಮ್ಮದೇ ಸರ್ಕಾರ ಇದೆ, ಅಲ್ಲಿ ಹೋಗಿ ಪಾದಯಾತ್ರೆ ಮಾಡಿ, ನಿಮ್ಮ ಮುಖ್ಯಮಂತ್ರಿಗೆ ಕೇಸ್ ವಾಪಾಸು ತೆಗೆದುಕೊಳ್ಳಲು ಹೇಳಿ ಎಂದು ಶ್ರೀರಾಮುಲು ಸವಾಲು ಹಾಕಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು