ಚಿತ್ರದುರ್ಗ : ಮುಂದಿನ ಚುನಾವಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಎಲ್ಲಿಯೇ ಸ್ಪರ್ಧೆ ಮಾಡಿದ್ರೂ ಅವರನ್ನು ಸೋಲಿಸುತ್ತೇವೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಚುನಾವಣೆಯಲ್ಲಿ ಸಿದ್ದರಾಮಯ್ಯ ಎಲ್ಲೇ ಸ್ಪರ್ಧೆ ಮಾಡಿದ್ರೂ ಸೋಲಿಸುತ್ತೇವೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ, ಕಾಂಗ್ರೆಸ್ ಗೆ ಜನರು ಮತ ನೀಡಲ್ಲ. ಹಾನಗಲ್ ಕ್ಷೇತ್ರದಲ್ಲಿ ಶ್ರೀನಿವಾಸ್ ಮಾನೆ ಅವರು ಕೋವಿಡ್ ವೇಳೆ ಜನಪರ ಕೆಲಸ ನೋಡಿ ಜನರು ಗೆಲ್ಲಿಸಿದ್ದಾರೆ. ಮುಂದಿನ ಚುನಾವಣೆಯಲ್ಲಿ ಬಡ್ಡಿ ಸಮೇತ ಗೆಲ್ತೀವಿ ಎಂದರು.
ರಾಜ್ಯದಲ್ಲಿ ಬಿಜೆಪಿ ಜೀರೋ ಎಂಬ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಈಶ್ವರಪ್ಪ, ಸಿದ್ದರಾಮಯ್ಯ ಹೀರೋನೋ, ಜೀರೋನೋ ಎಂದು ಕಳೆದ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಗೊತ್ತಾಗಿದೆ.