ಚಿತ್ರದುರ್ಗ: ಮಿನಿ ವಿಧಾನಸೌಧ ಎಂಬ ಹೆಸರಿನಲ್ಲಿ ಮಿನಿ ಎಂಬ ಆಂಗ್ಲ ಪದವಿದೆ. ಇದಕ್ಕೆ ಸಾಹಿತ್ಯ ವಲಯದಿಂದ ಆಕ್ಷೇಪ ವ್ಯಕ್ತವಾಗಿದೆ. ಈ ಹೆಸರಿನ ಬದಲಾವಣೆಯ ಬಗ್ಗೆ ಸರ್ಕಾರ ಶೀಘ್ರ ತೀರ್ಮಾನ ಕೈಗೊಳ್ಳಲಿದೆ ಎಂದು ಕಂದಾಯ ಸಚಿವ ಆರ್. ಅಶೋಕ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಲ್ಲೂಕು ಕಚೇರಿಯ ಕಟ್ಟಡಗಳಿಗೆ ಮಿನಿ ವಿಧಾನಸೌಧ ಎಂಬ ನಾಮಕರಣ ಮಾಡಲಾಗಿದೆ. ಅನೇಕ ಸಾಹಿತಿಗಳು ಇಂಗ್ಲಿಷ್ ಪದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಇದನ್ನು ತಾಲ್ಲೂಕು ಆಡಳಿತ ಸೌಧ ಎಂಬ ಕನ್ನಡ ಹೆಸರು ಇಡುವುದು ಸೂಕ್ತ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಈ ಬಗ್ಗೆ ಶೀಘ್ರ ಆದೇಶ ಹೊರಬೀಳಲಿದೆ ಎಂದು ಮಾಹಿತಿ ನೀಡಿದರು.
ರಾಜ್ಯದ 9 ಲಕ್ಷ ಹೆಕ್ಟೇರ್ ಭೂಮಿಗೆ ಸಂಬಂಧಿಸಿ ಕಂದಾಯ ಹಾಗೂ ಅರಣ್ಯ ಇಲಾಖೆ ನಡುವೆ ವ್ಯಾಜ್ಯ ನಡೆಯುತ್ತಿದೆ. ಈ ಸಂಬಂಧ ಅರಣ್ಯ ಸಚಿವರೊಂದಿಗೆ ಚರ್ಚಿಸಲಾಗಿದ್ದು, ಆರು ಲಕ್ಷ ಹೆಕ್ಟೇರ್ ಡೀಮ್ಡ್ ಅರಣ್ಯವನ್ನು ಕಂದಾಯ ಇಲಾಖೆಗೆ ಒಪ್ಪಿಸುವ ಒಡಂಬಡಿಕೆ ಆಗಿದೆ. ಬಗರ್ಹುಕುಂ ಸಾಗುವಳಿದಾರರಿಗೆ ಭೂಮಿ ನೀಡಲು ಅನುಕೂಲವಾಗಲಿದೆ. ಉಳುಮೆ ಮಾಡುವವರಿಗೆ ಭೂಮಿ ಸಿಗಲಿದೆ ಎಂದು ಹೇಳಿದರು.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ನಂದನಗದ್ದಾದಲ್ಲಿ ಮನೆಯಲ್ಲಿ ಅಡುಗೆ ಮಾಡುತಿದ್ದ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಘಟನೆ ನಡೆದಿದೆ.
ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಾಳೆ ನಡೆಯುವ ಮಹತ್ವದ ಪಂದ್ಯದಲ್ಲಿ ಆರ್ಸಿಬಿ ಕಣಕ್ಕಿಳಿಯಲು ಸಜ್ಜಾಗಿ ನಿಂತಿದ್ದರೂ ಕೂಡ ಪಂದ್ಯಕ್ಕೆ ಮಳೆ…
ಇಲ್ಲಿನ ಮಹಾಲಿಂಗೇಶ್ವರ ದೇವರ ಗದ್ದೆಯಲ್ಲಿ ತಿರುಗಾಡುತ್ತಿದ್ದ ಹೋರಿಗಳು ಮೇ.1 ರಿಂದ ನಾಪತ್ತೆಯಾಗಿರುವ ಘಟನೆಯೊಂದು ವರದಿಯಾಗಿದೆ. ಇದರ ಪತ್ತೆಗಾಗಿ ಬಜರಂಗದಳ ಇದೀಗ…
ಮುಂಗಾರು ಹಂಗಾಮಿನಲ್ಲಿ ರೈತರಿಗೆ ಬೀಜ ಮತ್ತು ರಸಗೊಬ್ಬರದ ಕೊರತೆ ಆಗದಂತೆ ನೋಡಿಕೊಳ್ಳುವಂತೆ ಕೃಷಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು.
ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಬಂದು ಒಂದು ವರ್ಷ ಆಗಿದೆ. ಆದರೆ ಇಲ್ಲಿ ಒಂದು ವರ್ಷದಲ್ಲಿ ಒಂದೂ ಶೌಚಾಲಯ ಕಟ್ಟಲು ಅವರಿಗೆ…
ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಹಿರೀಕಾಟಿ ಗ್ರಾಮದ ಸರ್ವೆ ನಂ. 108 ರಲ್ಲಿ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟಪಂಗಡದವರಿಗೆ ಸೇರಿದ 2 ಎಕರೆ…