News Karnataka Kannada
Sunday, April 28 2024
ಚಿತ್ರದುರ್ಗ

ಮೊಳಕಾಲ್ಮೂರು ಕ್ಷೇತ್ರ ವ್ಯಾಪ್ತಿಯ ಪ್ರತಿಯೊಂದು ಗ್ರಾಮಕ್ಕೂ ಸಹ ಎರಡು ತಿಂಗಳೊಳಗೆ ಬಸ್ ಸೌಲಭ್ಯ : ಸಚಿವ ಬಿ.ಶ್ರೀರಾಮುಲು

Sri Ramulu
Photo Credit :

ಚಿತ್ರದುರ್ಗ: ಮೊಳಕಾಲ್ಮೂರು ಕ್ಷೇತ್ರ ವ್ಯಾಪ್ತಿಯ ಪ್ರತಿಯೊಂದು ಗ್ರಾಮಕ್ಕೂ ಸಹ ಎರಡು ತಿಂಗಳೊಳಗೆ ಬಸ್ ಸೌಲಭ್ಯ ಕಲ್ಪಿಸಲು ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಭರವಸೆ ನೀಡಿದರು.

ಚಳ್ಳಕೆರೆ ತಾಲ್ಲೂಕಿನ ತಳಕು ಗ್ರಾಮದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಅಲೆಮಾರಿ ಜನಾಂಗದವರಿಗೆ ಮನೆ ಕಟ್ಟಿಕೊಳ್ಳಲು ಕಾರ್ಯಾದೇಶ ನೀಡುವ ಕಾರ್ಯಕ್ರಮದಲ್ಲಿ ಅಲೆಮಾರಿ ಜನಾಂಗದ ಫಲಾನುಭವಿಗಳಿಗೆ ವಸತಿಯೋಜನೆಯಡಿ ಮನೆ ಮಂಜೂರಾತಿ ಮತ್ತು ಕಾಮಗಾರಿ ಆದೇಶ ಪತ್ರ ವಿತರಣೆ ಮಾಡಿ ಅವರು ಮಾತನಾಡಿದರು.

ಮೊಳಕಾಲ್ಮುರು ಕ್ಷೇತ್ರದ ಅನೇಕ ಗ್ರಾಮಗಳಲ್ಲಿ ಸಂಚಾರಕ್ಕೆ ಬಸ್ ಸೌಕರ್ಯವಿಲ್ಲದೇ ಹಲವಾರು ಸಂಕಷ್ಟಗಳನ್ನು ಎದುರಿಸಿದ್ದರು. ಮೊಳಕಾಲ್ಮುರು ಕ್ಷೇತ್ರದ ಜನರಿಗೆ ಬಸ್ ಸೌಕರ್ಯ ಕಲ್ಪಿಸಬೇಕು ಎಂಬುದು ಹಿರಿಯ ನಾಗರಿಕರ ಹಾಗೂ ಪತ್ರಕರ್ತರ ಒತ್ತಾಸೆ ಆಗಿತ್ತು.

ಈ ಹಿನ್ನಲೆಯಲ್ಲಿ ಮೊಳಕಾಲ್ಮುರು ಕ್ಷೇತ್ರ ವ್ಯಾಪ್ತಿಯ ಎಲ್ಲ ಗ್ರಾಮಗಳಿಗೂ ಎರಡು ತಿಂಗಳೊಳಗೆ ಬಸ್ ಸೌಕರ್ಯ ಕಲ್ಪಿಸಲಾಗುವುದು. ಕ್ಷೇತ್ರದ ಯಾವ ಗ್ರಾಮವೂ ಸಹ ಬಸ್ ಸೌಲಭ್ಯದಿಂದ ವಂಚಿತವಾಗದಂತೆ ನೋಡಿಕೊಳ್ಳಲಾಗುವುದು ಎಂದು ಹೇಳಿದರು.

ಬೀದರ್‌ನಿಂದ ಶ್ರೀರಂಗಪಟ್ಟಣಕ್ಕೆ ಹೋಗುವ ರಸ್ತೆ, ಶ್ರೀರಂಗಪಟ್ಟಣದಿಂದ ಚಾಮರಾಜನಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ ಮಾಡಿದ್ದು, ಮೊಳಕಾಲ್ಮುರು ಕ್ಷೇತ್ರದಲ್ಲಿ ಅಂತರರಾಷ್ಟ್ರೀಯ ಗುಣಮಟ್ಟದ ರಸ್ತೆ ನಿರ್ಮಾಣ ಮಾಡಲಾಗಿದೆ ಎಂದರು.

ಮುಂಬರುವ ದಿನಗಳಲ್ಲಿ ಸ್ತ್ರೀಶಕ್ತಿ ಗುಂಪುಗಳಿಗೆ ಸಹಾಯಧನ ನೀಡುವ ಸಲುವಾಗಿ ಮೊಳಕಾಲ್ಮುರು ಕ್ಷೇತ್ರ ವ್ಯಾಪ್ತಿಯ ನಾಯಕನಹಟ್ಟಿ, ತಳಕು ಮತ್ತು ರಾಂಪುರ ಭಾಗದಲ್ಲಿ ಸುಮಾರು ೯೫ ಸ್ತ್ರೀಶಕ್ತಿ ಗುಂಪುಗಳಿದ್ದು, ಸ್ತ್ರೀಶಕ್ತಿ ಗುಂಪುಗಳ ಏಳಿಗೆಗಾಗಿ ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದು, ಸ್ತ್ರೀಶಕ್ತಿ ಗುಂಪುಗಳಿಗೆ ಸರ್ಕಾರದ ವತಿಯಿಂದ ಸಹಾಯಧನ ಸೌಲಭ್ಯ ನೀಡಲಾಗುತ್ತಿದೆ ಎಂದು ಹೇಳಿದರು.

ಭಾರತ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಅಮೃತ್ ಯೋಜನೆಗೆ ಜಿಲ್ಲೆಯಲ್ಲಿ ೨೨ ಗ್ರಾ.ಪಂ.ಗಳನ್ನು ಆಯ್ಕೆ ಮಾಡಲಾಗಿದೆ. ಮೊಳಕಾಲ್ಮುರು ತಾಲ್ಲೂಕಿನ ನಲಗೇತಹಟ್ಟಿ, ರಾಂಪುರ, ಕೊಂಡ್ಲಹಳ್ಳಿ ಹಾಗೂ ದೊಡ್ಡ ಉಳ್ಳಾರ್ತಿ ಸೇರಿದಂತೆ ನಾಲ್ಕು ಗ್ರಾ.ಪಂ.ಗಳನ್ನು ಅಮೃತ್ ಯೋಜನೆ ಆಯ್ಕೆ ಮಾಡಿಕೊಂಡಿದ್ದು, ಈ ನಾಲ್ಕು ಗಾ.ಪಂ. ವ್ಯಾಪ್ತಿಯಲ್ಲಿ ಸುಮಾರು ೫ ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿ.ಪಂ. ಸಿಇಒ ಡಾ.ಕೆ.ನಂದಿನಿದೇವಿ, ಗ್ರಾ.ಪಂ. ಸದಸ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು