ಚಿತ್ರದುರ್ಗ: ರಾಜಸ್ಥಾನ ಮೂಲದ ಬಟ್ಟೆ ವ್ಯಾಪಾರಿ ಮೇಲೆ ಗುಂಡು ಹಾರಿಸಿ ಹತ್ಯೆಗೈದಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ಪಟ್ಟಣದಲ್ಲಿ ನಡೆದಿದೆ.
ಕೊಲೆಯಾದ ಮೂಲ್ಸಿಂಗ್ (30) ಆರು ವರ್ಷಗಳಿಂದ ಹೊಳಲ್ಕೆರೆ ಪಟ್ಟಣದಲ್ಲಿ ಪ್ರಿಯದರ್ಶಿನಿ ಟೆಕ್ಸ್ ಟೈಲ್ಸ್ ನಲ್ಲಿ ಬಟ್ಟೆ ವ್ಯಾಪಾರ ಮಾಡಿಕೊಂಡಿದ್ದರು. ಮಂಗಳವಾರ ರಾತ್ರಿ 9 ಗಂಟೆಗೆ ಅಂಗಡಿ ಬಂದ್ ಮಾಡಲು ಪೂಜೆ ಮಾಡ್ತಿದ್ದ ವೇಳೆ ಮೂಲ್ಸಿಂಗ್ ಕುತ್ತಿಗೆ ಭಾಗಕ್ಕೆ ಶೂಟ್ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಗುಂಡಿಕ್ಕಿದ ಆರೋಪಿಗಳು ಎಸ್ಕೇಪ್ ಆಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.ಇನ್ನು ಶೂಟೌಟ್ ನಿಂದಾಗಿ ಮೂಲಸಿಂಗ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂಲ್ಸಿಂಗ್ ರಾಜಸ್ಥಾನದ ಸರ್ದಾರ್ ಪುರ ಗ್ರಾಮದ ನಿವಾಸಿಯಾಗಿದ್ದಾರೆ. ಕಳೆದ ಆರು ವರ್ಷಗಳಿಂದ ಹೊಳಲ್ಕೆರೆಯಲ್ಲಿ ವಾಸವಾಗಿದ್ದರು. 5 ವರ್ಷಗಳ ಹಿಂದೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ರಾಮಗಿರಿಯಲ್ಲಿ ಕಲ್ಯಾಣಸಿಂಗ್ ಎಂಬ ಬಟ್ಟೆ ವ್ಯಾಪಾರಿಯನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ ಪ್ರಕರಣದ ಆರೋಪಿಯಾಗಿದ್ದರು. ಇದೇ ಹಿನ್ನೆಲೆಯಲ್ಲಿ ಕೊಲೆ ನಡೆದಿದೆ ಎನ್ನಲಾಗಿದೆ.
ಶಿವಮೊಗ್ಗದಲ್ಲಿ ನಡೆದಿದ್ದ ಗ್ಯಾಂಗ್ ವಾರ್ ಪ್ರಕರಣದಲ್ಲಿ ಮೂವರನ್ನು ನಡುಬೀದಿಯಲ್ಲಿ ಕೊಚ್ಚಿ ಕೊಲೆ ಮಾಡಿದ್ದ ಆರೋಪಿಗಳಲ್ಲಿ ಒಬ್ಬ ರೌಡಿ ಶೀಟರ್ ಕಾಲಿಗೆ…
ಅಮೇರಿಕಾದಲ್ಲಿ ಎಂಡಿಎಚ್ ಸಾಂಬಾರ್ ಮಸಾಲ ಪದಾರ್ಥಗಳು ತಿರಸ್ಕೃತಗೊಂಡಿವೆ. ಈ ಮಸಾಲಗಳಲ್ಲಿ ಸಾಲ್ಮೋನೆಲ್ಲಾ ಬ್ಯಾಕ್ಟೀರಿಯಾ ಕಂಡುಬಂದಿದ್ದರಿಂದ ಅಮೆರಿಕದ ಆಹಾರ ಹಾಗೂ ಔಷಧ…
ಜೈಪುರದ ಪೊಲೀಸರು ಸೋಮವಾರ ಕನಿಷ್ಠ ನಾಲ್ಕು ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದ್ದಾರೆ ಎಂದು ವರದಿ ಮಾಡಿದ್ದಾರೆ. ಸಂತ್ರಸ್ತ…
ಪ್ರಧಾನ ಮಂತ್ರಿ ನರೇಂದ್ರ ಮೋದಿ ನಾಳೆ ಬೆಳಿಗ್ಗೆ ವಾರಾಣಸಿಯಲ್ಲಿ ಲೋಕಸಭೆ ಚುನಾವಣೆ ಬಿಜೆಪಿ ಸ್ಪರ್ಧಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಇದಕ್ಕೆ ಒಂದು…
ಕಿಡ್ನಾಪ್ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲುಪಾಲಾಗಿರುವ ಮಾಜಿ ಸಚಿವ ಎಚ್.ಡಿ ರೇವಣ್ಣ ಅವರು ಇಂದು ಮತ್ತೆ ಜಾಮೀನು ಅರ್ಜಿ ವಿಚಾರಣೆ…
ಚುನಾವಣೆಗೂ ಮುನ್ನ ದಿನವೇ ಜಾರ್ಖಂಡ್ನ ಪಲಮುವಿನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೂವರು ಅಪ್ರಾಪ್ತರು ಸೇರಿದಂತೆ ಕನಿಷ್ಠ ನಾಲ್ವರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು…