News Karnataka Kannada
Wednesday, May 08 2024
ಚಿತ್ರದುರ್ಗ

ರಾತ್ರಿ ಅಂಗಡಿಗೆ ಬೆಂಕಿ ; ವ್ಯಕ್ತಿ ಸಜೀವ ದಹನ

Crime Chitradurga 21 7 21
Photo Credit :

 

ಚಿತ್ರದುರ್ಗ: ಇಲ್ಲಿಗೆ ಸಮೀಪದ ಹೊಳಲ್ಕೆರೆ ತಾಲೂಕಿನ ತೇಕಲವಟ್ಟಿ ಗ್ರಾಮದಲ್ಲಿ ಬುಧವಾರ ಬೆಳಗಿನ ಜಾವ ಮನೆಯೊಂದು ಬೆಂಕಿಯಿಂದಾಗಿ ಹೊತ್ತಿ ಉರಿದಿದ್ದು, ಮಲಗಿದ್ದಲ್ಲೇ ವ್ಯಕ್ತಿಯೊಬ್ಬ ಸಜೀವ ದಹನ ಆಗಿದ್ದಾರೆ. ಮೃತರನ್ನು ಮನೆ ಮಾಲೀಕ ಪ್ರಕಾಶ್ (55) ಎಂದು ಗುರುತಿಸಲಾಗಿದ್ದು . ಇವರ ಪತ್ನಿ ಗಂಭೀರ ಗಾಯಗೊಂಡಿದ್ದು, ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಕಾಶ್​ ಮನೆಯಲ್ಲೇ ಕಿರಾಣಿ ಅಂಗಡಿ ಇಟ್ಟುಕೊಂಡಿದ್ದರು. ಬೆಳಗಿನ ಜಾವ ಮನೆಯಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ್ದು, ನಿದ್ರೆ ಮಾಡುತ್ತಿದ್ದ ಪ್ರಕಾಶ್​ ಅಲ್ಲೇ ಸುಟ್ಟುಕರಕಲಾಗಿದ್ದಾರೆ. ಕಿರಾಣಿ ಅಂಗಡಿಯಲ್ಲಿದ್ದ ಸಾಮಗ್ರಿ ಸಂಪೂರ್ಣ ಸುಟ್ಟು ಬೂದಿಯಾಗಿದೆ. ಚಿತ್ರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು