ಚಿತ್ರದುರ್ಗ: ಎಲ್ಲಾ ಕ್ಷೇತ್ರದಲ್ಲಿ ಬಿಜೆಪಿಗೆ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ. ಹಾಗಾಗಿ ಬಿಜೆಪಿ ಅಭ್ಯರ್ಥಿಗಳು ಮತ್ತು ಕಾರ್ಯಕರ್ತರು ಉತ್ಸ್ಸಾಹದಲ್ಲಿದ್ದಾರೆ. ಕನಿಷ್ಠ ೧೫ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಖಚಿತ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ರಾಘವೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.
ಖಾಸಗಿ ಕಾರ್ಯಕ್ರಮದ ನಿಮಿತ್ತ ಭಾನುವಾರ ಚಿತ್ರದುರ್ಗಕ್ಕೆ ಆಗಮಿಸಿದ ಅವರು ಸುದ್ದಿಗಾರರ ಜೊತೆ ಮಾತನಾಡಿ, ಕಾಂಗ್ರೆಸ್ ಪಕ್ಷ ಮುಳುಗುತ್ತಿರುವ ಹಡಗು. ಇಡೀ ದೇಶದಲ್ಲಿ ಕಾಂಗ್ರೆಸ್ ಅಸ್ತಿತ್ವ ಕಳೆದುಕೊಂಡಿದೆ. ಬರುವ ದಿನಗಳಲ್ಲಿ ಕಾಂಗ್ರೆಸ್ ಎಲ್ಲಿರುತ್ತದೆ ಎಂದು ತಿಳಿಯುತ್ತದೆ. ಬಿಜೆಪಿ ಪಕ್ಷ ಉಪಸಮರದಲ್ಲಿ ವಿಜಯ ಪತಾಕೆ ಹಾರಿಸಿತ್ತು. ಈ ಚುನಾವಣೆಯಲ್ಲಿ ಕೂಡಾ ಬಿಜೆಪಿ ಅಭ್ಯರ್ಥಿಗಳ ಗೆಲವು ಶತ ಸಿದ್ಧ ಎಂದರು.
ಬಿಜೆಪಿ ಹಾಗೂ ಜೆಡಿಎಸ್ ಹೊಂದಾಣಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಮಾಜಿ ಸಿಎಂ ಯಡಿಯೂರಪ್ಪ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ರಾಜ್ಯ ಬಿಜೆಒ ಅಧ್ಯಕ್ಷರು, ಮುಖ್ಯಮಂತ್ರಿಗಳು, ಯಡಿಯೂರಪ್ಪ ಅವರು ಚರ್ಚಿಸಿ ನಿರ್ಧಾರ ಮಾಡುತ್ತಾರೆ. ಎಲ್ಲಾ ಕ್ಷೇತ್ರದಲ್ಲಿ ಗೆಲ್ಲುವ ಅವಕಾಶ ಇದೆ, ಹೆಚ್ಚಿನ ಅಂತರದಲ್ಲಿ ಗೆಲ್ಲಲು ಜೆಡಿಎಸ್ ಪಕ್ಷದ ಬಗ್ಗೆ ಹೇಳಿದ್ದಾರೆ.
ಬಿಜೆಪಿ ಪಕ್ಷದ ಶಕ್ತಿ ಹಿಂದಿನ ಚುನಾವಣೆಯಲ್ಲಿ ಗೊತ್ತಾಗಿದೆ. ಈಗಲೂ ಕೂಡಾ ಗೊತ್ತಾಗುತ್ತದೆ ಎಂದು ಹೇಳಿದರು.
ಕೋವೀಡ್ ಮೂರನೇ ಅಲೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಇಡೀ ಜಗತ್ತಿನಲ್ಲಿ ಆತಂಕ ಸೃಷ್ಟಿಯಾಗಿದೆ. ಆರ್ಥಿಕ ಸಂಕಷ್ಟದಿಂದ ಹೊರ ಬಂದ ವೇಳೆ ಮತ್ತೆ ಈ ರೀತಿ ವಿಚಾರ ಆತಂಕ ತಂದಿದೆ. ಕೊರೋನಾ ನಿವಾರಣೆಗೆ ದೇವರಲ್ಲಿ ಪ್ರಾರ್ಥನೆ ಮಾಡಬೇಕು ಎಂದ ಅವರು, ಮುಂಬರುವ ಚುನಾವಣೆಯಲ್ಲಿ ಬಿ.ವೈ.ವಿಜಯೇಂದ್ರ ಸ್ಪರ್ಧೆ ಮಾಡುತ್ತಾರೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ, ನಾನು ಎಲ್ಲಿ ಚುನಾವಣೆ ಸ್ಪರ್ಧಿಸಬೇಕು ಎಂಬುದು ಪಕ್ಷ ತೀರ್ಮಾನ ಮಾಡುತ್ತದೆ. ಆದರೆ ನಾನು ಪಕ್ಷಕ್ಕಾಗಿ ರಾಜ್ಯ ಪ್ರವಾಸ ಮಾಡುತ್ತಿದ್ದೇನೆ ಎಂದರು.