ಚಿತ್ರದುರ್ಗ: ಆಕಸ್ಮಿಕ ಬೆಂಕಿ ತಗುಲಿದ ಕೊಬ್ಬರಿ ಗೋದಾಮು ಹೊತ್ತಿ ಉರಿದಿದ್ದು, ಲಕ್ಷಾಂತರ ಮೌಲ್ಯದ ಕೊಬ್ಬರಿ ಬೆಂಕಿಗಾಹುತಿಯಾದ ಘಟನೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಚಿಕ್ಕಬ್ಯಾಲದಕೆರೆ ಗ್ರಾಮದಲ್ಲಿ ಘಟನೆ ನಡೆದಿದೆ. ಚಿಕ್ಕಬ್ಯಾಲದಕೆರೆ ಬಳಿಯ ತೋಟದಲ್ಲಿದ್ದ ಗೋದಾಮು ಉದ್ಯಮಿ ಜಗದೀಶ್ ಎಂಬವರಿಗೆ ಈ ಕೊಬ್ಬರಿ ಗೋದಾಮು ಸೇರಿದ್ದು, ಗ್ರಾಮದ ಹೊರವಲಯದಲ್ಲಿತ್ತು.
ಇದೀಗ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಕೊಬ್ಬರಿ ಸುಟ್ಟು ಕರಕಲಾಗಿದ್ದು, ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಶ್ರೀರಾಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.