ಚಿತ್ರದುರ್ಗ: ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರ ಸಮನ್ವಯ ಸಭೆ ಕರೆಯಲಾಗಿತ್ತು. ಈ ವೇಳೆ ಕಾರ್ಯಕರ್ತರು ಬಡಿದಾಡಿಕೊಂಡ ಘಟನೆ ಚಿತ್ರದುರ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ತುಮಕೂರು ಜಿಲ್ಲೆಯ ಪಾವಗಡದಲ್ಲಿ ನಡೆದಿದೆ.
ಬಿಜೆಪಿ ಕಾರ್ಯಕರ್ತ ಚೈತನ್ಯ ಮೇಲೆ ಪಾವಗಡ ಬಿಜೆಪಿ ಯುವ ಮೋರ್ಚಾ ಮಾಜಿ ಅಧ್ಯಕ್ಷ ಮಧುನಿಂದ ಹಲ್ಲೆ ಮಾಡಲಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ಪರ ವಿರೋಧ ಪೋಸ್ಟ್ ಹಿನ್ನೆಲೆ ಗಲಾಟೆ ನಡೆದಿದೆ. ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ತೆರಳಿದ ಬೆನ್ನಲ್ಲೇ ಮಾರಾಮಾರಿ ನಡೆದಿದೆ.
ರಾಜ್ಯದೆಲ್ಲೆಡೆ ಬಿಜೆಪಿ-ಜೆಡಿಎಸ್ ದೋಸ್ತಿ ಪಕ್ಷಗಳು ಸಾಕಷ್ಟು ಗೊಂದಲದ ನಡುವೆಯೂ ಭರ್ಜರಿ ಪ್ರಚಾರದಲ್ಲಿ ತೊಡಗಿವೆ. ಆದರೆ ತುರುವೇಕೆರೆಯಲ್ಲಿ ಮಾತ್ರ ಎರಡೂ ಪಕ್ಷಗಳ ಗೊಂದಲ ಜಗತ್ ಜಾಹೀರಾಗಿತ್ತು. ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಪರ ನಡೆದ ಪ್ರಚಾರ ಕಾರ್ಯಕ್ರಮದಲ್ಲಿ ಜೆಡಿಎಸ್-ಬಿಜೆಪಿ ಕಾರ್ಯಕರ್ತರು ವಾಗ್ವಾದ ನಡೆಸಿದ್ದರು.
ತುರುವೇಕೆರೆಯ ರಾಜಕೀಯ ಬದ್ದ ವೈರಿಗಳಾದ ಎಂಟಿ ಕೃಷ್ಣಪ್ಪ, ಮಸಾಲೆ ಜಯರಾಂ ಇಬ್ಬರೂ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡು ಒಗ್ಗಟ್ಟಿನ ಮಂತ್ರ ಜಪಿಸಿದ್ದು, ಅಲ್ಲಿದವರಿಗೆ ವಿಶೇಷ ಅನಿಸಿದ್ದರೆ, ಕಾರ್ಯಕರ್ತರು ಪರಸ್ಪರ ವಾಗ್ವಾದ ಮಾಡಿಕೊಂಡಿದ್ದು ಮಾತ್ರ ದೋಸ್ತಿ ಮುರಿದ್ದರು.