ಚಿತ್ರದುರ್ಗ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬೆಂಗಾವಲು ವಾಹನ ಪಲ್ಟಿಯಾದ ಘಟನೆ ಜಿಲ್ಲೆಯ ಹಿರಿಯೂರು ಪಟ್ಟಣದಲ್ಲಿ ನಡೆದಿದೆ.
ಹಿರಿಯೂರು ತಾಲ್ಲೂಕು ಕಚೇರಿ ಬಳಿ ಈ ಘಟನೆ ನಡೆದಿದ್ದು, ಕೆಲವು ಪೊಲೀಸರು ಗಾಯಗೊಂಡಿದ್ದಾರೆ. ವಾಹನವು ಡಿಕ್ಕಿ ಹೊಡೆದಾಗ ಇಬ್ಬರು ಪಾದಚಾರಿಗಳು ಗಾಯಗೊಂಡಿದ್ದಾರೆ.
ತಾಯಿ ಮತ್ತು ಮಗ ನಡೆದುಕೊಂಡು ಹೋಗುತ್ತಿದ್ದಾಗ ಬೆಂಗಾವಲು ವಾಹನವು ಅವರಿಗೆ ಡಿಕ್ಕಿ ಹೊಡೆದಿದೆ. ಮಸ್ಕಲ್ ಗ್ರಾಮದ ಪಾದಚಾರಿಗಳಾದ ಮಂಜುಳಾ ಮತ್ತು ಅವರ ಮಗ ಮನೋಜ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹಿರಿಯೂರು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.