News Karnataka Kannada
Wednesday, May 01 2024
ಚಿತ್ರದುರ್ಗ

ಚಿತ್ರದುರ್ಗ: ಜನರನ್ನು ಭಿಕ್ಷುಕರನ್ನಾಗಿಸಲು ಕಾಂಗ್ರೆಸ್‌ ಯೋಜನೆ- ಕೇಂದ್ರ ಸಚಿವ ನಾರಾಯಣ ಸ್ವಾಮಿ

Congress planning to turn people into beggars: Union Minister Narayanasamy
Photo Credit : News Kannada

ಚಿತ್ರದುರ್ಗ: ಮತದಾರರನ್ನು ಭಿಕ್ಷುಕರ ಸಾಲಿನಲ್ಲಿ ನಿಲ್ಲಿಸುವ ಕೆಲಸವನ್ನು ಕಾಂಗ್ರೆಸ್‌ ಮಾಡುತ್ತಿದೆ ಎಂದು ಚುನಾವಣೆಯನ್ನು ಸಿದ್ದಾಂತದ ಆಧಾರದಲ್ಲಿ ಗೆಲ್ಲದೆ, ಗ್ಯಾರಂಟಿಗಳ ಆಧಾರದಲ್ಲಿ ಗೆದ್ದಿದ್ದಾರೆ ಎಂದು ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ವಾಗ್ದಾಳಿ ನಡೆಸಿದರು.

ಚಿತ್ರದುರ್ಗದಲ್ಲಿ ಮಾತನಾಡಿದ ಅವರುಮತದಾರರನ್ನು ಬಿಕ್ಷುಕರ ಸಾಲಿನಲ್ಲಿ ನಿಲ್ಲಿಸುತ್ತೇವೆ, ಗ್ಯಾರಂಟಿ ಕೊಟ್ಟು ಚುನಾವಣೆ ಎದುರಿಸುತ್ತೇವೆ ಎನ್ನುವ ಸ್ವಭಾವದ ಮೂಲಕ, ಕಾಂಗ್ರೆಸ್ ಭವಿಷ್ಯದ ದಿನಗಳಲ್ಲಿ ಮತದಾರರನ್ನು ಭಿಕ್ಷಾಟನೆ ಕೂಪಕ್ಕೆ ತಳ್ಳುವ ವ್ಯವಸ್ಥೆ ಮಾಡುತ್ತಿದೆ ಎಂದರು.

ಸಿದ್ದಾಂತದಿಂದ ಚುನಾವಣೆ ಗೆದ್ದಿದ್ದೇವೆ ಎಂದು ಹೇಳುವ ನೈತಿಕತೆ ಕಾಂಗ್ರೆಸ್ ಪಕ್ಷಕ್ಕೆ ಇಲ್ಲ. ಕಳೆದ 15 ದಿನಗಳಿಂದ ರಾಜ್ಯವನ್ನು ಹೇಗೆ‌ ಮುನ್ನಡೆಸಬೇಕು ಎನ್ನುವ ಚರ್ಚೆಗಿಂತ ಗ್ಯಾರಂಟಿ ಬಗ್ಗೆಯೇ ಚರ್ಚೆ ನಡೆಯುತ್ತಿದೆ. ಮೂಲ ಸೌಕರ್ಯ, ರೈತರ ಸಮಸ್ಯೆ ಬಿಟ್ಟು ಇಂತಹ ಚರ್ಚೆಗಳನ್ನು ಬಿಟ್ಟು ಜನರ ದಿಕ್ಕು ತಪ್ಪಿಸುತ್ತಿದ್ದಾರೆ ಎಂದರು.

ರಾಜ್ಯದಲ್ಲಿ ಚುನಾವಣೆ ಸಂದರ್ಭದಲ್ಲಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಗ್ಯಾರಂಟಿ ಬಗ್ಗೆ ಮಾತನಾಡಿದ್ದಕ್ಕೆ ಸಾಕ್ಷಿ ಇದೆ. ಮನೆ ಮನೆಗೆ ಸಹಿ ಮಾಡಿ ಗ್ಯಾರಂಟಿ ಕೊಟ್ಟಿದ್ದಾರೆ. ಈ ಬಗ್ಗೆ ಜನ ಕೇಳುತ್ತಿದ್ದಾರೆ ಎಂದು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು