News Karnataka Kannada
Saturday, May 04 2024
ಚಿತ್ರದುರ್ಗ

ಮುರುಘಾ ಶ್ರೀಗಳಿಗೆ ಶಾಕ್​ ಕೊಟ್ಟ ಚಿತ್ರದುರ್ಗ ಜಿಲ್ಲಾ ಕೋರ್ಟ್​​

Chitradurga District Court Gives Shock To Muruga Seer
Photo Credit : News Kannada

ಚಿತ್ರದುರ್ಗ: ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರನ್ನು ನ್ಯಾಯಾಂಗ ಬಂಧನದಿಂದ ಬಿಡುಗಡೆ ಮಾಡುವ ಅದೇಶವನ್ನು ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ನ.15ಕ್ಕೆ ಮುಂದೂಡಿದೆ.

ಪೋಕ್ರೋ ಪ್ರಕರಣಕ್ಕೆ ಹೈಕೋರ್ಟ್‌ ನಲ್ಲಿ ಜಾಮೀನು ಮಂಜೂರು ಮಾಡಿದ ಹೈಕೋರ್ಟ್‌ ಆದೇಶದ ಪ್ರತಿಯನ್ನು ಶರಣರ ಪರ ವಕೀಲರು ಶುಕ್ರವಾರ ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಿದರು.

ಹೈಕೋರ್ಟ್‌ ವಿಧಿಸಿದ ಷರತ್ತುಗಳ ಅನ್ವಯ ಭದ್ರತಾ ಖಾತರಿ ಪರಿಶೀಲಿಸಿ ಬಿಡುಗಡೆ ಆದೇಶ ಪ್ರಕಟಿಸಲು ನ್ಯಾಯಾಲಯ ಬುಧವಾರಕ್ಕೆ ಸಮಯ ನಿಗದಿಪಡಿಸಿತು.

ಎರಡನೇ ಪೋಸ್ಕೊ ಪ್ರಕರಣದಲ್ಲಿ ಬಾಡಿ ವಾರೆಂಟ್ ಮೇಲೆ ಶರಣರನ್ನು ವಿಚಾರಣೆ ನಡೆಸಿದ್ದ ಪೊಲೀಸರು, ನ್ಯಾಯಾಂಗ ಬಂಧನಕ್ಕೆ ಕೋರಿಕೆ ಸಲ್ಲಿಸಿದರು. ಸರ್ಕಾರಿ ಪರ ವಕೀಲ ಜಗದೀಶ್ ಅವರು ಅರ್ಜಿಯೊಂದನ್ನು ನ್ಯಾಯಾಲಯದ ಮುಂದಿಟ್ಟರು. ಇದನ್ನು ನ.15ರಂದು ಪರಿಶೀಲನೆ ಮಾಡುವುದಾಗಿ ನ್ಯಾಯಾಧೀಶ ಬಿ.ಕೆ.ಕೋಮಲಾ ಪ್ರಕಟಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು